Webdunia - Bharat's app for daily news and videos

Install App

ಕರ್ನಾಟಕಕ್ಕೆ ಮೇಕೆದಾಟು ಡ್ಯಾಂ ಕಟ್ಟುವ ಹಕ್ಕಿದ್ದರೆ, ಅದನ್ನು ನಿಲ್ಲಿಸುವ ಹಕ್ಕು ನಮಗೂ ಇದೆ; ತಮಿಳುನಾಡು

Webdunia
ಬುಧವಾರ, 14 ಜುಲೈ 2021 (08:28 IST)
ಚೆನ್ನೈ; ಬೆಂಗಳೂರಿನ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಕರ್ನಾಟಕ ಸರ್ಕಾರ ಆರಂಭಿಸಿರುವ ಮೇಕೆದಾಟು ಯೋಜನೆ ಇದೀಗ ತಮಿಳುನಾಡು-ಕರ್ನಾಟಕದ ನಡುವೆ ಬಿಸಿ ವಾತಾವರಣವನ್ನು ನಿರ್ಮಿಸಿದೆ.

ಮೇಕೆದಾಟು ಯೋಜನೆ ಯ ವಿರುದ್ಧ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ನಡೆಸಿ 3 ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡ ಬೆನ್ನಿಗೆ, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ "ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಯಿಂದ ಹಿಂದೆ ಸರಿಯುವುದಿಲ್ಲ" ಎಂದು ಹೇಳಿಕೆ ನೀಡಿದ್ದರು. ಆದರೆ, ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್, "ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ತೀರ್ಪಿನ ವಿರುದ್ಧ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಹಕ್ಕು ಕರ್ನಾಟಕಕ್ಕೆ ಇದ್ದರೆ, ಕಾನೂನು ಮಾರ್ಗದ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲು ಹಕ್ಕು ನಮಗೂ ಇದೆ" ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.
ಕಳೆದ ಸೋಮವಾರ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ಕರೆದಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೆಕೆಡಾಟು ಯೋಜನೆಗೆ ಅನುಮತಿ ನೀಡಬಾರದೆಂದು ಕೇಂದ್ರವನ್ನು ಒತ್ತಾಯಿಸಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಆದರೆ, ಈ ಬಗ್ಗೆ ಕಟು ಹೇಳಿಕೆ ನೀಡಿದ್ದ ಸಚಿವ ಬಸವರಾಜ ಬೊಮ್ಮಾಯಿ, "ಕರ್ನಾಟಕದ ಜನರ ಹಿತಾಸಕ್ತಿಯನ್ನು ಕಾಪಾಡುವ ಹಕ್ಕು ಕರ್ನಾಟಕ ಸರ್ಕಾರಕ್ಕಿದೆ. ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವುದು ಜನರ ಹಿತಾಸಕ್ತಿ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯನ್ನು ಕೈಗೊಳ್ಳಲಾಗಿದೆ. ಹೀಗಾಗಿ ಈ ಯೋಜನೆಯಿಂದ ಕರ್ನಾಟಕ ಹಿಂದೆ ಸರಿಯುವ ಮಾತೇ ಇಲ್ಲ" ಎಂದು ತಿಳಿಸಿದ್ದರು.
ಅಲ್ಲದೆ, "ಕರ್ನಾಟಕದ ಮೇಕೆದಾಟು ಯೋಜನೆಯ ಸಂಪೂರ್ಣ ವರದಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೆ, ಈ ವರದಿಯು ಕೇಂದ್ರ ಜಲ ಆಯೋಗಕ್ಕೂ ಸಲ್ಲಿಸಲಾಗಿದೆ. ಹೀಗಾಗಿ ಕರ್ನಾಟಕದ ಮನವಿಯನ್ನು ಕಾನೂನಿನ ಪ್ರಕಾರ ಭಾರತ ಸರ್ಕಾರ ಪರಿಗಣಿಸಬೇಕಾಗಿದೆ" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಆದರೆ, ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ದೊರೈ ಮುರುಗನ್, "ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣ ಕುರಿತು ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ. ಈ ಪರಿಸ್ಥಿತಿಯಲ್ಲಿ, ತಮಿಳುನಾಡಿನ ಕಡೆಗೆ ಹರಿಯುವ ನೀರಿನ ಹಾದಿಯನ್ನು ತಡೆಯುವ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಮೂಲಕ ಕರ್ನಾಟಕ ಸರ್ಕಾರ ಉನ್ನತ ನ್ಯಾಯಾಲಯದ ತೀರ್ಪನ್ನು ಕಡೆಗಣಿಸುತ್ತಿದೆ. ಇದಲ್ಲದೆ, ಕರ್ನಾಟ ಸಚಿವರು ಕಾವೇರಿ ಟ್ರಿಬ್ಯೂನಲ್ ಮತ್ತು ಸುಪ್ರೀಂ ಕೋರ್ಟ್ನ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಆಶ್ಚರ್ಯವಾಗುತ್ತಿದೆ. ಕರ್ನಾಟಕದ ವರ್ತನೆಯು ರಾಷ್ಟ್ರೀಯ ಪ್ರತಿಪಾದನೆಯಾಗಿ ರಾಜ್ಯವು ನದಿಯ ಮೇಲೆ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ಹೇಳಿಕೆಯ ಸ್ಪಷ್ಟ ಉಲ್ಲಂಘನೆ" ಎಂದು ಕಿಡಿಕಾರಿದ್ದಾರೆ.
"ಇದು ಪ್ರಜಾಪ್ರಭುತ್ವ ದೇಶ. ಕರ್ನಾಟಕದಲ್ಲಿ ಇಂತಹ ಪ್ರವೃತ್ತಿಗಳು ಬೆಳೆಯುತ್ತಿರುವಾಗ ಕೇಂದ್ರ ಸರ್ಕಾರ ಪ್ರೇಕ್ಷಕರಾಗಿ ಉಳಿಯುವುದು ಸರಿಯಲ್ಲ. ನೆರೆಯ ರಾಜ್ಯಗಳ ನಡುವಿನ ಆರೋಗ್ಯಕರ ಸಂಬಂಧಕ್ಕೆ ಇದು ಒಳ್ಳೆಯದಲ್ಲ” ಎಂದು ತಮಿಳುನಾಡು ಸಚಿವ ದೊರೈ ಮುರುಗನ್ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments