Webdunia - Bharat's app for daily news and videos

Install App

ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2 ಸಾವಿರ ಸಿಗಲ್ಲ

Webdunia
ಶನಿವಾರ, 10 ಜೂನ್ 2023 (09:04 IST)
ಬೆಂಗಳೂರು : ಗ್ಯಾರಂಟಿ ಗೊಂದಲಗಳ ಬಗ್ಗೆ ಜನಾಕ್ರೋಶ ಹೆಚ್ಚಾಗುತ್ತಿದ್ದರೂ ಸರ್ಕಾರ ಮಾತ್ರ ಹೊಸ ಹೊಸ ಷರತ್ತುಗಳನ್ನು ಹಾಕುತ್ತಲೇ ಇದೆ. ಇವತ್ತು ಗೃಹಲಕ್ಷ್ಮಿ ಯೋಜನೆಗೆ ಇನ್ನೊಂದು ಷರತ್ತು ಸೇರ್ಪಡೆಯಾಗಿದೆ.
 
ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸರ್ಕಾರ ವಿಧಿಸುತ್ತಿರುವ ಷರತ್ತುಗಳ ಬಗ್ಗೆ ವಿಪಕ್ಷಗಳು ಮಾತ್ರವಲ್ಲ ಹಲವು ಸಚಿವರು ಕೂಡ ಆಂತರಿಕವಾಗಿ ಆಕ್ಷೇಪ ಎತ್ತುತ್ತಿದ್ದಾರೆ.

ಜನಾಕ್ರೋಶ, ವಿಪಕ್ಷಗಳ ಟೀಕೆ ಲಘುವಾಗಿ ಪರಿಗಣಿಸಬೇಡಿ. ನಿರೀಕ್ಷೆ ಇಟ್ಟು ಜಾರಿ ಮಾಡಿರೋ ಗ್ಯಾರಂಟಿಗಳ ಲಾಭ ಪಕ್ಷಕ್ಕೆ ಸಿಗಬೇಕು. ಗ್ಯಾರಂಟಿಗಳೇ ನಮಗೆ ಮುಳುವಾಗಬಾರದು ಎಂದು ಸಲಹೆ ನೀಡಿದ್ದಾರೆ.  

ಜನ ಸುಮ್ಮನಾಗದಿದ್ದರೆ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಹಾನಿ ಖಚಿತ. ಬಿಜೆಪಿ ಕೈಗೆ ಯಾವ ಕಾರಣಕ್ಕೂ ಗ್ಯಾರಂಟಿ ಅಸ್ತ್ರ ಸಿಗಬಾರದು. ಮುಂದೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಬಿಬಿಎಂಪಿ, ಲೋಕಸಭೆ ಚುನಾವಣೆ ಬರುತ್ತಿದೆ. ದುಡುಕದೇ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ ಎಂದು ಕೆಲವರು ಸಿಎಂ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments