Webdunia - Bharat's app for daily news and videos

Install App

ತಾಕತ್ತಿದ್ರೆ ಮೊದ್ಲು ಚಾಮುಂಡೇಶ್ಚರಿ ಕ್ಷೇತ್ರದಿಂದ ಗೆದ್ದು ಬನ್ನಿ: ಸಿಎಂಗೆ ಈಶ್ವರಪ್ಪ ಸವಾಲ್

Webdunia
ಸೋಮವಾರ, 2 ಏಪ್ರಿಲ್ 2018 (16:32 IST)
ಹಾವೇರಿ: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ರೆ ಮೊದ್ಲು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬರಲಿ. ನಂತರ ಮುಖ್ಯಮಂತ್ರಿಯಾಗುವ ಬಗ್ಗೆ ಹೇಳಿಕೆ ನೀಡಲಿ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. 
ಹಾವೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಕಂತೆ ಸಿ.ಎಂ. ಮಾತನಾಡಲಿ. ಬಿಜೆಪಿ ಒಂದು ಕುಟುಂಬ ಇದ್ದ ಹಾಗೇ, ನಮ್ಮಲ್ಲಿ ಇದ್ದ ಗೊಂದಲ ಸರಿಪಡಿಸಿಕೊಳ್ಳುತ್ತೇವೆ ಎಂದು ಸಿಎಂಗೆ ಟಾಂಗ್ ನೀಡಿದ್ದಾರೆ.
 
ಸೋಮಣ್ಣ ಮಾಡಿದ ಕೆಲಸ ಅಶಿಸ್ತು ಅಲ್ಲ, ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಅಮಿತ್ ಶಾ ಹಾಗೂ ಮೋದಿ ಅಂದ್ರೆ ಓಡೋಡಿ ಬರುತ್ತಾರೆ.
ಸಿದ್ದರಾಮಯ್ಯ  ಹಾಗೂ ರಾಹುಲ್ ಅಂದ್ರೆ ಓಡಿ ಹೋಗುತ್ತಾರೆ ಎಂದು ಲೇವಡಿ ಮಾಡಿದರು.
 
ಹಾವೇರಿ ಜಿಲ್ಲೆಯ ಕಾಗಿನೆಲ್ಲಿಯಲ್ಲಿರುವ ಹಿಂದುಳಿದ ವರ್ಗದ ಸಮಾವೇಶಕ್ಕೆ ಅಮಿತ ಶಾ ಬರುವದು ನಿಶ್ಚಿತ.ಕಾಗಿನೆಲೆಯ ಆದಿಕೇಶವ ದೇವಸ್ಥಾನಕ್ಕೆ ಹಾಗೂ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಮಾವೇಶಕ್ಕೆ ಬರುವ ಜನರಿಗೆ ಊಟದ ಮಾಡಲು ಅನುಮತಿ ನೀಡುವಂತೆ ಚುನಾವಣೆ ಅಧಿಕಾರಿಗಳನ್ನು ಕೇಳಿಕೊಳ್ಳಲಾಗುವದು ಎಂದರು.
 
ಬಿಜೆಪಿ ಸರ್ಕಾರ ಇದ್ದಾಗ, ಹಿಂದುಳಿದ ವರ್ಗದ ಸಾಕಷ್ಟು ಕೆಲಸ ಮಾಡಿದೆ.‌ಮುಖ್ಯಮಂತ್ರಿಗಳು 5 ವರ್ಷದಲ್ಲಿ ಹಿಂದುಳಿದ ವರ್ಗಗಳಕ್ಕೆ ದಲಿತ ಅಭಿವೃದ್ಧಿಗೆ ಖರ್ಚು ಮಾಡಿರುವ ಹಣ ಏಷ್ಟು ಎಂದು ಬಹಿರಂಗ ಪಡಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಗುಡುಗಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವುದೇ ಬೀದಿ ನಾಯಿಯನ್ನು ಬಿಡಬೇಡಿ: ರಕ್ಷಣೆಗೆ ಬಂದವರ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಸೂಚನೆ

ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ: ಕಾರಣ ಇದೇನಾ

ನಿನ್ನೆ ಮೋದಿಯಿಂದ ಲೋಕಾರ್ಪಣೆಯಾದ ಮೆಟ್ರೋಗೆ ಇಂದು ಇದೆಂಥಾ ಪ್ರತಿಕ್ರಿಯೆ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments