Webdunia - Bharat's app for daily news and videos

Install App

ಮುಂದಿನ ವರ್ಷದಿಂದ ನೈತಿಕ ಶಿಕ್ಷಣ ಜಾರಿ : ಬಿಸಿ ನಾಗೇಶ್

Webdunia
ಬುಧವಾರ, 11 ಜನವರಿ 2023 (07:03 IST)
ಬೆಂಗಳೂರು : ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಗೆ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಧರ್ಮಗುರುಗಳ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದ್ದು, ಧರ್ಮಾತೀತವಾಗಿ ಎಲ್ಲಾ ಗುರುಗಳು ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ಧರ್ಮಾತೀತವಾಗಿ ಧರ್ಮಗುರುಗಳು ಸಹಮತ ವ್ಯಕ್ತಪಡಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮಠಾಧೀಶರು, ಧರ್ಮಗುರುಗಳು, ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಶಾಲಾ ಹಂತದಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದು ಧರ್ಮ ಗುರುಗಳು ಸಲಹೆ ನೀಡಿದ್ದಾರೆ. ಅಲ್ಲದೆ ನೈತಿಕ ಶಿಕ್ಷಣದಲ್ಲಿ ಯಾವ ಯಾವ ಮೌಲ್ಯಯುತ ಅಂಶಗಳು ಸೇರಿಸಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಶ್ರೀಗಳು, ಸಿರಿಗೆರೆ ಶ್ರೀಗಳು, ರವಿಶಂಕರ್ ಗುರೂಜಿ, ಪೇಜಾವರ ಶ್ರೀಗಳು, ಮಾದಾರ ಚೆನ್ನಯ್ಯ ಶ್ರೀಗಳು, ರಾಘವೇಶ್ವರ ಶ್ರೀಗಳು, ಪೀಟರ್ ಮ್ಯಾಚಾರೋ, ಡಾ. ಕಸ್ತೂರಿ ರಂಗನ್, ಅಬ್ದುಲ್ ರಹೀಂ ಸೇರಿ ಹಲವು ಧರ್ಮಗಳ ಧರ್ಮಗುರುಗಳು ಭಾಗವಹಿಸಿ ಅಭಿಪ್ರಾಯ ತಿಳಿಸಿದರು.

ನೈತಿಕ ಶಿಕ್ಷಣ ಜಾರಿ ಪ್ರಕ್ರಿಯೆಗೆ ಸಮಿತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಜಾರಿ ಮಾಡೋದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments