ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ!

Webdunia
ಬುಧವಾರ, 22 ಡಿಸೆಂಬರ್ 2021 (06:16 IST)
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಒಟ್ಟು 10 ಲಕ್ಷಕ್ಕೂ ಹೆಚ್ಚಿನ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಒಣಭೂಮಿ ಬೇಸಾಯದ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 6800 ರೂ. ಪರಿಹಾರ ನಿಗದಿಪಡಿಸಲಾಗಿದೆ.

ಇದಕ್ಕೆ ರಾಜ್ಯ ಸರ್ಕಾರವು ಇನ್ನೂ 6,800 ರೂ. ಸೇರಿಸಿ, 13600 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಅಂತೆಯೇ ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 13,500 ರೂ. ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ 11,500 ರೂ. ನೀಡಲು ನಿರ್ಧರಿಸಿದ್ದು,

ಇದರಿಂದ ರೈತರಿಗೆ ಹೆಕ್ಟೇರ್ಗೆ 25,000 ರೂ. ದೊರೆಯಲಿದೆ. ತೋಟಗಾರಿಕಾ ಬೆಳೆಗಳಿಗೆ ಹೆಕ್ಟೇರ್ಗೆ 18,000 ರೂ. ಪರಿಹಾರ ನಿಗದಿ ಪಡಿಸಿದ್ದು, ರಾಜ್ಯದ ಬೊಕ್ಕಸದಿಂದ ಇದಕ್ಕೆ 10,000 ರೂ. ಸೇರಿಸಿ, ಒಟ್ಟು 28,000 ರೂ. ಪರಿಹಾರ ನೀಡಲಾಗುವುದು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 1200 ಕೋಟಿ ರೂ. ಹೊರೆ ಉಂಟಾಗಲಿದೆ ಎಂದು ಅವರು ಸದನದಲ್ಲಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಮುಂದಿನ ಸುದ್ದಿ
Show comments