Daily Horoscope

ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ!

Webdunia
ಬುಧವಾರ, 22 ಡಿಸೆಂಬರ್ 2021 (06:16 IST)
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಒಟ್ಟು 10 ಲಕ್ಷಕ್ಕೂ ಹೆಚ್ಚಿನ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಒಣಭೂಮಿ ಬೇಸಾಯದ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 6800 ರೂ. ಪರಿಹಾರ ನಿಗದಿಪಡಿಸಲಾಗಿದೆ.

ಇದಕ್ಕೆ ರಾಜ್ಯ ಸರ್ಕಾರವು ಇನ್ನೂ 6,800 ರೂ. ಸೇರಿಸಿ, 13600 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಅಂತೆಯೇ ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 13,500 ರೂ. ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ 11,500 ರೂ. ನೀಡಲು ನಿರ್ಧರಿಸಿದ್ದು,

ಇದರಿಂದ ರೈತರಿಗೆ ಹೆಕ್ಟೇರ್ಗೆ 25,000 ರೂ. ದೊರೆಯಲಿದೆ. ತೋಟಗಾರಿಕಾ ಬೆಳೆಗಳಿಗೆ ಹೆಕ್ಟೇರ್ಗೆ 18,000 ರೂ. ಪರಿಹಾರ ನಿಗದಿ ಪಡಿಸಿದ್ದು, ರಾಜ್ಯದ ಬೊಕ್ಕಸದಿಂದ ಇದಕ್ಕೆ 10,000 ರೂ. ಸೇರಿಸಿ, ಒಟ್ಟು 28,000 ರೂ. ಪರಿಹಾರ ನೀಡಲಾಗುವುದು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 1200 ಕೋಟಿ ರೂ. ಹೊರೆ ಉಂಟಾಗಲಿದೆ ಎಂದು ಅವರು ಸದನದಲ್ಲಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments