Webdunia - Bharat's app for daily news and videos

Install App

ಗೋಧಿ ರಪ್ತು ನಿಷೇಧಿಸಿದ ಭಾರತ!

Webdunia
ಬುಧವಾರ, 25 ಮೇ 2022 (11:56 IST)
ನವದೆಹಲಿ : ರಾಷ್ಟ್ರದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ಭಾರತವು ಈ ತಿಂಗಳ ಆರಂಭದಲ್ಲಿ ವಿದೇಶಕ್ಕೆ ಗೋಧಿ ರಫ್ತನ್ನು ನಿಷೇಧಿಸಿತು.

ಆದರೆ ಭಾರತ ಗೋಧಿ ರಫ್ತು ಮೇಲಿನ ತನ್ನ ನಿಷೇಧವನ್ನು ಆದಷ್ಟು ಬೇಗ ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ  ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಅವರು ಭಾರತವನ್ನು ಒತ್ತಾಯಿಸಿದ್ದಾರೆ.

ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಜಾರ್ಜಿವಾ, ರಫ್ತುಗಳನ್ನು ನಿರ್ಬಂಧಿಸುವುದು ಇತರ ರಾಷ್ಟ್ರಗಳನ್ನು ಅದೇ ರೀತಿ ಮಾಡಲು ಪ್ರೇರೇಪಿಸಬಹುದು. ಇದು ಜಾಗತಿಕ ಸಮುದಾಯವನ್ನು ಬಿಕ್ಕಟ್ಟಿಗೆ ಸಿಲುಕಿಸುತ್ತದೆ ಎಂದು ಕ್ರಿಸ್ಟಲಿನಾ ಜಾರ್ಜಿವಾ ಒತ್ತಿ ಹೇಳಿದರು.

ಭಾರತ ಗೋಧಿ ಮೇಲಿನ ರಫ್ತು ನಿಷೇಧವನ್ನು ತೆಗೆದು ಹಾಕಿದರೆ ಅದು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಕೇಳಿದಾಗ, ರಷ್ಯಾ-ಉಕ್ರೇನ್ ಯುದ್ಧದಿಂದಾಗಿ  ಇಡೀ ವಿಶ್ವಕ್ಕೆ ಗೋಧಿ ಪೂರೈಕೆಯ ಕೊರತೆ ತೀವ್ರ ಪರಿಣಾಮ ಬೀರಿದೆ.

ಹೀಗಿರುವಾಗ ಭಾರತವು ಎಷ್ಟು ರಫ್ತು ಮಾಡಬಹುದು ಮತ್ತು ಅದು ತನ್ನ ರಫ್ತುಗಳನ್ನು ಎಲ್ಲಿ ನಿರ್ದೇಶಿಸುತ್ತದೆ ಎಂಬುದರ ಆಧಾರದ ಮೇಲೆ ಅದನ್ನು ನಿರ್ಧರಿಸಬಹುದು ಎಂದು ಜಾರ್ಜಿವಾ ಹೇಳಿದರು.

ವಿಶೇಷವಾಗಿ ಗೋಧಿಯ ಕೊರತೆಯಿಂದ ತೀವ್ರವಾಗಿ ಬಾಧಿತವಾಗಿರುವ ಈಜಿಪ್ಟ್ ಅಥವಾ ಲೆಬನಾನ್ನಂತಹ ದೇಶಗಳಿಗೆ  ರಫ್ತುಗಳು ಹೋದರೆ ಗಮನಾರ್ಹ ಪರಿಣಾಮ ಆಗಲಿದೆ. ಹೆಚ್ಚುತ್ತಿರುವ ಹಸಿವು ಮಾತ್ರವಲ್ಲದೆ ಸಾಮಾಜಿಕ ಅಶಾಂತಿಯ ಅಪಾಯವಿರುವ ದೇಶಗಳಲ್ಲಿ ಇವು ಸೇರಿವೆ. ಇದು ಜಾಗತಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments