Webdunia - Bharat's app for daily news and videos

Install App

ಬಾಂಗ್ಲಾದೇಶಕ್ಕೆ 200 MT ಆಕ್ಸಿಜನ್ ಪೂರೈಕೆ ಮಾಡಲಿದೆ ಭಾರತೀಯ ರೈಲ್ವೇ!

Webdunia
ಭಾನುವಾರ, 25 ಜುಲೈ 2021 (08:37 IST)
ನವದೆಹಲಿ(ಜು.24): ಕೊರೋನಾ 2ನೇ ಅಲೆಯಲ್ಲಿ ಭಾರತ ತೀವ್ರವಾಗಿ ಆಕ್ಸಿಜನ್ ಕೊರತೆ ಎದುರಿಸಿತ್ತು. ಈ ವೇಳೆ ಭಾರಿತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ಪ್ರೆಸ್ ದೇಶದ ಮೂಲೆ ಮೂಲೆಗೆ ಆಮ್ಲಜನಕ ಹೊತ್ತು ಸಾಗಿತು. ಈ ಮೂಲಕ ದೇಶದ ಆಕ್ಸಿಜನ್ ಕೊರತೆಯನ್ನು ಪರಿಹರಿಸಿತ್ತು. ಇದೀಗ ಭಾರತದ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಬಾಂಗ್ಲಾದೇಶಕ್ಕೆ 200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಿದೆ.

•ಭಾರತೀಯ ರೈಲ್ವೆಯಿಂದ ಮತ್ತೊಂದು ಮಹತ್ವದ ಹೆಜ್ಜೆ
•ಬಾಂಗ್ಲಾದೇಶಕ್ಕೆ 200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ನಿರ್ಧಾರ
•ಭಾರತದಿಂದ  ಬಾಂಗ್ಲಾದೇಶಕ್ಕೆ ಸಾಗಲಿಗೆ ಆಕ್ಸಿಜನ್
ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಅತಿ ಶೀಘ್ರವೇ  ಬಾಂಗ್ಲಾದೇಶಕ್ಕೆ ತನ್ನ ಪ್ರಯಾಣ ಬೆಳೆಸಲಿದೆ. ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ನೆರೆ ರಾಷ್ಟ್ರಕ್ಕೆ ತನ್ನ ಪ್ರಯಾಣ ಮತ್ತು ಸೇವಾ ಕಾರ್ಯಾಚರಣೆ ಆರಂಭಿಸುತ್ತಿದೆ. ಬಾಂಗ್ಲಾದೇಶದ ಬೆನಪೋಲ್ಗೆ 200 ಮೆಟ್ರಿಕ್ ಟನ್ ತೂಕದ  ವೈದ್ಯಕೀಯ ಆಮ್ಲಜನಕ ಸಾಗಿಸಲು ಆಗ್ನೇಯ ರೈಲ್ವೆ ಇಲಾಖೆಯು ಇಂದು ಚಕ್ರಧಾರ್ಪುರ್ ವಿಭಾಗದ ಟಾಟಾದಲ್ಲಿ ಬೇಡಿಕೆ ಪತ್ರ ಸಲ್ಲಿಸಿದೆ.
200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ  ಆಮ್ಲಜನಕವನ್ನು 10 ಕಂಟೈನರ್|ಗಳಿಗೆ ಭರ್ತಿ ಮಾಡಿ, ಬೋಗಿಗಳಿಗೆ ತುಂಬಿ, ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಪ್ರಯಾಣಕ್ಕೆ ಸಜ್ಜುಗೊಳಿಸಲಾಗಿದೆ.
ಕೊರೊನಾ 2ನೇ ಅಲೆ ದೇಶದಲ್ಲಿ ವ್ಯಾಪಕವಾದಾಗ, ದೇಶದೆಲ್ಲೆಡೆ ಎದುರಾದ ವೈದ್ಯಕೀಯ ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು, 2021 ಏಪ್ರಿಲ್ 24ರಂದು ಕಾರ್ಯಾಚರಣೆ ಆರಂಭಿಸಿದವು. ದೇಶದ 15 ರಾಜ್ಯಗಳಿಗೆ 35,000 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಿಸಲು 480ಕ್ಕಿಂತ ಹೆಚ್ಚಿನ ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು ಕಾರ್ಯಾಚರಣೆ ನಡೆಸಿದವು.
ಭಾರತೀಯ ರೈಲ್ವೆಯು ಸಾಧ್ಯವಾದಷ್ಟು ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ತಲುಪಿಸಲು ಪ್ರಯತ್ನಿಸುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments