Webdunia - Bharat's app for daily news and videos

Install App

ಸೋಂಕು : ಆತಂಕದಲ್ಲಿ ಕಾಫಿನಾಡಿಗರು!

Webdunia
ಸೋಮವಾರ, 10 ಜನವರಿ 2022 (06:04 IST)
ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಿತ್ಯ ಸಿಂಗಲ್ ಡಿಜಿಟ್ನಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಒಂದೇ ದಿನ 78ಕ್ಕೆ ಏರಿರೋದ್ರಿಂದ ಜಿಲ್ಲೆಯ ಜನ ಆಂತಕಕ್ಕೀಡಾಗಿದ್ದಾರೆ.

ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂಡಿಗೆರೆಯಲ್ಲಿ 37 ಹಾಗೂ ಚಿಕ್ಕಮಗಳೂರಿನಲ್ಲಿ 17 ಕೇಸ್ ಪತ್ತೆಯಾಗಿವೆ. ಮೂಡಿಗೆರೆಯ ಹಾಸ್ಟೆಲ್ ನಲ್ಲಿ 37 ಮಕ್ಕಳಿಗೆ ಹಾಗೂ ಚಿಕ್ಕಮಗಳೂರಿನ 15 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. 

ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನ ಮತ್ತಷ್ಟು ಕಂಗೆಡಿಸಿದೆ. ಮೂಡಿಗೆರೆ ತಾಲೂಕಿನ ಬಾಳೂರಿನ ಹಾಸ್ಟೆಲ್ ನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು.

ಹಾಸ್ಟೆಲ್ ನಲ್ಲಿದ್ದ 405 ಮಕ್ಕಳಿಗೂ ಪರೀಕ್ಷೆ ನಡೆಸಿದಾಗ 37 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿರುವ ಹಾಸ್ಟೆಲ್ ನಲ್ಲಿ ಆರೋಗ್ಯ ಇಲಾಖೆ ನಡೆಸಿದ ರ್ಯಾಡಮ್ ಟೆಸ್ಟ್ ನಲ್ಲಿ 17 ಮಕ್ಕಳಿಗೆ ಪಾಸಿಟಿವ್ ಪತ್ತೆಯಾಗಿದೆ.

ಚಿಕ್ಕಮಗಳೂರು ಹಾಗೂ ಮೂಡಿಗೆರೆ ಶಾಲೆ ಹಾಗೂ ಕಾಲೇಜಿನ ಎಲ್ಲ ಮಕ್ಕಳಿಗೂ ಹೋಂ ಐಸೋಲೇಶನ್ ಮೂಲಕ ಚಿಕಿತ್ಸೆ ಮುಂದುವರೆಸುತ್ತಿದ್ದು, ಯಾರಿಗೂ ರೋಗದ ಲಕ್ಷಣಗಳು ಇಲ್ಲವೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments