ಈಶ್ವರಪ್ಪ ರಾಜೀನಾಮೆಗೆ ಒತ್ತಾಯ!?

Webdunia
ಬುಧವಾರ, 13 ಏಪ್ರಿಲ್ 2022 (07:33 IST)
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ.

ಕಮಿಷನ್ ಆರೋಪ, ಗುತ್ತಿಗೆದಾರರ ಸಾವು ಇಟ್ಟುಕೊಂಡು, ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಇವತ್ತು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ಗುತ್ತೆಗೆದಾರ ಸಂತೋಷ್ ಡೆತ್ನೋಟ್ನಲ್ಲಿ ಈಶ್ವರಪ್ಪ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ, ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಲಿದ್ದಾರೆ.

ಈಶ್ವರಪ್ಪ ತಲೆದಂಡ ಹಾಗೂ ಬಂಧನಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿನ ಈಶ್ವರಪ್ಪ ನಿವಾಸ ಹಾಗೂ ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮ ನಡೆಯುತ್ತಿದ್ದ ಹೋಟೆಲ್ಗೂ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ರು. ಇಂದು ಕೂಡ ರಾಜ್ಯಾದ್ಯಂತ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. 

ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ,

ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ. “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಆಕ್ರೋಶ ಹೊರಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments