Select Your Language

Notifications

webdunia
webdunia
webdunia
webdunia

ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್

ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್
ಕಲಬುರಗಿ , ಸೋಮವಾರ, 16 ಏಪ್ರಿಲ್ 2018 (06:29 IST)
ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು  ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ ಎಂಬುದಾಗಿ ತಿಳಿಸಿದ್ದಾರೆ.


ಭಾನುವಾರ ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ನಟ ಚೆತನ್ ಅವರು,’ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಸಾಕಷ್ಟು ಶ್ರಮಿಸಿದ ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಲಿಂಗಾಯತರಿಗೆ ಕರೆ ನೀಡುವುದು ಸರಿಯಲ್ಲ. ನಮ್ಮ ದೃಷ್ಟಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಪಕ್ಷಗಳೂ ಒಂದೇ. ಅವರು ಬೇಕಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಲಿ. ಅದನ್ನು ಬಿಟ್ಟು ಈ ರೀತಿ ಲಿಂಗಾಯತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹೇಳುವುದು ಸರಿಯಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿರಿಯಾ ವಿರುದ್ಧ ಯುದ್ಧ ಘೋಷಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್