Select Your Language

Notifications

webdunia
webdunia
webdunia
webdunia

ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ : ನಾಗೇಶ್

ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ : ನಾಗೇಶ್
ಬೆಂಗಳೂರು , ಗುರುವಾರ, 18 ಆಗಸ್ಟ್ 2022 (12:59 IST)
ಬೆಂಗಳೂರು : ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ.

ಆದ್ರೆ ನಮಾಜ್ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. 

ಹಿಂದೆ ಯಾವ ನಿಯಮಗಳು ಇದ್ದವೋ ಅದೇ ನಿಯಮ ಈಗಲೂ ಇವೆ. ಗಣೇಶ ಹಬ್ಬ ಬಿಜೆಪಿ ಸರ್ಕಾರ ಬಂದಾಗಿನಿಂದ ಮಾಡಿದ್ದು ಅಲ್ಲ. ಬ್ರಿಟಿಷರ ಕಾಲದಿಂದಲೂ ಗಣೇಶೋತ್ಸವ ಮಾಡಿಕೊಂಡು ಬರಲಾಗ್ತಿದೆ.

ಹಿಂದೆ ಯಾವ ರೀತಿ ನಡೆಯುತ್ತಿತ್ತೋ ಅದೇ ರೀತಿ ನಡೆದುಕೊಂಡು ಬರಲಿದೆ. ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವೈಯಕ್ತಿಕವಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ