Webdunia - Bharat's app for daily news and videos

Install App

ನನ್ನ ಜನಪ್ರಿಯತೆಗೆ ಹೆದರಿ ಐಟಿ ದಾಳಿ ನಡೆಸಲಾಗುತ್ತಿದೆ: ಸಿಎಂ

Webdunia
ಮಂಗಳವಾರ, 8 ಮೇ 2018 (16:11 IST)
ಬಾದಾಮಿಯಲ್ಲಿ ಸಿಎಂ ಉಳಿದಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದ್ದಾರೆ. 
ಬಿಜೆಪಿಯಂತಹ ಮೂರ್ಖರು ಯಾರೂ ಇಲ್ಲ ಬಾದಾಮಿಯಲ್ಲಿ ನಾನು ವಾಸ್ತವ್ಯ ಹೂಡಿದ್ದ ರೆಸಾರ್ಟ್ ರೇಡ್ ಮಾಡಿದ್ದಾರೆ. ಐಟಿ ಇಲಾಖೆಯನ್ನ ನರೇಂದ್ರ ಮೋದಿ, ಅಮಿತ್ ಶಾ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾಮನ್ ಸೆನ್ಸ್ ಇದ್ಯಾ ಅವ್ರಿಗೆ, ನಾನ್ ದುಡ್ಡು ಅಲ್ಲೇ ಬಿಟ್ಟು ಬಂದಿದ್ದೀನಾ ನನಗೆ ಹೆದರಿ ಐಟಿ ಬಿಟ್ಟಿದ್ದಾರೆ. ಇದೊಂದು ನಾನ್ ಸೆನ್ಸ್ ವಿಚಾರ ಅಮಿತ್ ಶಾ ಉಳಿಸಿಕೊಂಡಿದ್ದ ರೂಂ ಯಾಕೆ ರೈಡ್ ಮಾಡಲ್ಲ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪ ಮನೆ ಮೇಲೆ ಯಾಕೆ ದಾಳಿ ಮಾಡಿಲ್ಲ
 
ಸಿಎಂ ಆಪ್ತ ಮರಿಸ್ವಾಮಿಗೌಡ ಮನೆ ರೈಡ್ ಆಯ್ತು ಅಂತಾರೆ ಎಲ್ಲಿ ರೈಡ್ ಆಗಿದೆ. ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಅಂತಾ ಬಿಜೆಪಿ ಮಂದಿಗೆ ಗೊತ್ತಾಗಿದೆ. ಹೀಗಾಗಿ ಹೆದರಿ ವಾಮ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.
 
ಈ ಬಾರಿ ರಾಜ್ಯದಲ್ಲಿ ನಾವೇ ಬಹುಮತದೊಂದಿಗೆ ಅಧಿಕಾರಕ್ಕೆ ಬರ್ತಿವೆ. ಕಾವೇರಿ ನದಿ ನೀರಿನ ವಿಚಾರ ಕೇಂದ್ರ ಸರ್ಕಾರ ಇರೋದು ಸುಪ್ರೀಂ ಆದೇಶ ಜಾರಿಗೆ ತರಲು ಕೇಂದ್ರ ಸರ್ಕಾರ ಮೊದಲು ಅದನ್ನು ಮಾಡಬೇಕು
 
ಕಾವೇರಿ ನದಿ ವಿಚಾರ ಸ್ಕಿಂ ಜಾರಿಗೆ ಮತ್ತೋಮ್ಮೆ ಒತ್ತಾಯಿಸಿದ ಸಿಎಂ, ಕಾಂಗ್ರೆಸ್ ಪಕ್ಷ ಶಕ್ತಿ ಕಳೆದುಕೊಳ್ಳುತ್ತಿದೆ ಹಾಗಾಗಿ ಸೋನಿಯಾಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡ್ತಾರೆ ಅನ್ನೋ ಬಿಜೆಪಿ ಹೇಳಿಕೆ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಗರಂ ಆದ ಸಿಎಂ, ಸೋನಿಯಾಗಾಂಧಿ ಯಾರು‌ ಅವರು ನಮ್ಮ ಪಕ್ಷದ ವರೀಷ್ಠರುಹಾಗಾದರೆ ಪ್ರಧಾನಿ ಮೋದಿ, ಅಮಿತ್ ಶಾ , ಯೋಗಿ ಆಧಿತ್ಯನಾಥ್ ಏನಕ್ಕೆ ಬರ್ತಾವರೆ. ಬಿಜೆಪಿ ಶಕ್ತಿ ಕುಂದಿದೆ ಅಂತ ಬರ್ತಿದ್ದಾರಾ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments