Select Your Language

Notifications

webdunia
webdunia
webdunia
webdunia

ಜೆಡಿಎಸ್ ವಿರುದ್ಧವಾಗಿ ಭವಿಷ್ಯ ನುಡಿದ ಜಮೀರ್ ಅಹ್ಮದ್

ಜೆಡಿಎಸ್ ವಿರುದ್ಧವಾಗಿ  ಭವಿಷ್ಯ ನುಡಿದ ಜಮೀರ್ ಅಹ್ಮದ್
ಚಿತ್ರದುರ್ಗ , ಮಂಗಳವಾರ, 10 ಏಪ್ರಿಲ್ 2018 (16:00 IST)
ಚಿತ್ರದುರ್ಗ : ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ 115 ಸೀಟು ಗೆದ್ದರೆ ನಮ್ಮ ತಾಯಾಣೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವುದರ ಜೊತೆಗೆ ರಾಜ್ಯ ಬಿಟ್ಟು ಹೋಗುತ್ತೇನೆ ಎಂದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.


ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,’ ನಮ್ಮಪ್ಪಾನಾಣೆ ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ಜೆಡಿಎಸ್ ಪಕ್ಷ ಸೆಕ್ಯೂಲರ್ ಅಲ್ಲವೇ ಅಲ್ಲ. ಕುಮಾರಸ್ವಾಮಿ ಅವರಲ್ಲಿ ಶೇ. 10 ರಷ್ಟು ಜಾತ್ಯಾತೀತ ಅಂಶಗಳಿಲ್ಲ. ಈ ಚುನಾವಣೆಯಲ್ಲಿ ಏನಾದ್ರೂ ಜೆಡಿಎಸ್ 115 ಸೀಟು ಗೆದ್ದರೆ ನಮ್ಮ ತಾಯಾಣೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವುದರ ಜೊತೆಗೆ ರಾಜ್ಯ ಬಿಟ್ಟು ಹೋಗುತ್ತೇನೆ. ಜೆಡಿಎಸ್ 20-30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂಬುದು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಹಿಂದೆ ಹೋಗುವುದು ಗೊತ್ತಿಲ್ಲ. ಭಯ ಬಂದಿರುವುದು ಕುಮಾರಸ್ವಾಮಿ ಅವರಿಗೆ, ಹೀಗಾಗಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಎನ್ ತಿಪ್ಪೇಸ್ವಾಮಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪ್ರತಿಭಟನೆ ಜೋರು