Webdunia - Bharat's app for daily news and videos

Install App

ಜೆಡಿಎಸ್ ನಲ್ಲೂ ಬಂಡಾಯದ ಬಿಸಿ! ಸಿಎಂ ಕೈಗೂ ಸಿಗುತ್ತಿಲ್ಲ ನೂತನ ಸಚಿವರು!

Webdunia
ಶನಿವಾರ, 9 ಜೂನ್ 2018 (08:54 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಬಿಕ್ಕಟ್ಟು ಜೆಡಿಎಸ್ ಪಕ್ಷಕ್ಕೂ ತಗಲಿದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತರು ಒಂದೆಡೆಯಾದರೆ ಪ್ರಮುಖ ಖಾತೆಗಾಗಿ ಪಟ್ಟು ಹಿಡಿದು ನೂತನ ಸಚಿವರು ಸಿಎಂ ಕೈಗೂ ಸಿಗದೇ ಓಡಾಡುತ್ತಿದ್ದಾರೆ.

ಇಂಧನ, ಹಣಕಾಸು, ಕಂದಾಯ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜೆಡಿಎಸ್ ಈ ಪ್ರಮುಖ ಖಾತೆಗಳನ್ನು ದೇವೇಗೌಡರ ಕುಟುಂಬದವರಿಗೇ ನೀಡಿದ್ದಾರೆ ಎನ್ನುವುದು ನೂತನವಾಗಿ ಸಚಿವರಾಗಿ ಬಡ್ತಿ ಹೊಂದಿದ ಸಿಎಸ್ ಪುಟ್ಟರಾಜು, ಜಿಟಿ ದೇವೇಗೌಡ ಮುಂತಾದವರ ಆರೋಪ.

ಈ ಹಿನ್ನಲೆಯಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಕರೆ ಮಾಡಿದರೂ ಮೊಬೈಲ್ ಕರೆ ಸ್ವೀಕರಿಸುತ್ತಿಲ್ಲ. ಇಬ್ಬರೂ ಶಾಸಕರು ಮೈಸೂರಿಗೆ ತೆರಳಿದ್ದಾರೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ. ಇಂಧನ ಮತ್ತು ಹಣಕಾಸು ಖಾತೆ ಸಿಎಂ ಕುಮಾರಸ್ವಾಮಿಯೇ ಉಳಿಸಿಕೊಂಡಿದ್ದಾರೆ. ಇನ್ನು, ಲೋಕೋಪಯೋಗಿ ಖಾತೆಯನ್ನು ಎಚ್ ಡಿ ರೇವಣ್ಣ ಪಡೆದಿದ್ದಾರೆ. ಕೇವಲ ಶಿಕ್ಷಣ ಇತ್ಯಾದಿ ಅಷ್ಟೇನೂ ಪ್ರಮುಖವಲ್ಲದ ಖಾತೆಗಳನ್ನು ತಮಗೆ ನೀಡಿದ್ದಾರೆ ಎಂದು ಈ ಸಚಿವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments