Webdunia - Bharat's app for daily news and videos

Install App

ಜೆಡಿಎಸ್ ನಲ್ಲೂ ಬಂಡಾಯದ ಬಿಸಿ! ಸಿಎಂ ಕೈಗೂ ಸಿಗುತ್ತಿಲ್ಲ ನೂತನ ಸಚಿವರು!

Webdunia
ಶನಿವಾರ, 9 ಜೂನ್ 2018 (08:54 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಬಿಕ್ಕಟ್ಟು ಜೆಡಿಎಸ್ ಪಕ್ಷಕ್ಕೂ ತಗಲಿದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತರು ಒಂದೆಡೆಯಾದರೆ ಪ್ರಮುಖ ಖಾತೆಗಾಗಿ ಪಟ್ಟು ಹಿಡಿದು ನೂತನ ಸಚಿವರು ಸಿಎಂ ಕೈಗೂ ಸಿಗದೇ ಓಡಾಡುತ್ತಿದ್ದಾರೆ.

ಇಂಧನ, ಹಣಕಾಸು, ಕಂದಾಯ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜೆಡಿಎಸ್ ಈ ಪ್ರಮುಖ ಖಾತೆಗಳನ್ನು ದೇವೇಗೌಡರ ಕುಟುಂಬದವರಿಗೇ ನೀಡಿದ್ದಾರೆ ಎನ್ನುವುದು ನೂತನವಾಗಿ ಸಚಿವರಾಗಿ ಬಡ್ತಿ ಹೊಂದಿದ ಸಿಎಸ್ ಪುಟ್ಟರಾಜು, ಜಿಟಿ ದೇವೇಗೌಡ ಮುಂತಾದವರ ಆರೋಪ.

ಈ ಹಿನ್ನಲೆಯಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಕರೆ ಮಾಡಿದರೂ ಮೊಬೈಲ್ ಕರೆ ಸ್ವೀಕರಿಸುತ್ತಿಲ್ಲ. ಇಬ್ಬರೂ ಶಾಸಕರು ಮೈಸೂರಿಗೆ ತೆರಳಿದ್ದಾರೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ. ಇಂಧನ ಮತ್ತು ಹಣಕಾಸು ಖಾತೆ ಸಿಎಂ ಕುಮಾರಸ್ವಾಮಿಯೇ ಉಳಿಸಿಕೊಂಡಿದ್ದಾರೆ. ಇನ್ನು, ಲೋಕೋಪಯೋಗಿ ಖಾತೆಯನ್ನು ಎಚ್ ಡಿ ರೇವಣ್ಣ ಪಡೆದಿದ್ದಾರೆ. ಕೇವಲ ಶಿಕ್ಷಣ ಇತ್ಯಾದಿ ಅಷ್ಟೇನೂ ಪ್ರಮುಖವಲ್ಲದ ಖಾತೆಗಳನ್ನು ತಮಗೆ ನೀಡಿದ್ದಾರೆ ಎಂದು ಈ ಸಚಿವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments