Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ

Webdunia
ಗುರುವಾರ, 3 ಮೇ 2018 (06:09 IST)
ಮೈಸೂರು : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಬಗ್ಗೆ ಹದಿನೈದು ನಿಮಿಷ ಮಾತನಾಡಲಿ ಎಂದು ಹೇಳುವ ಮೋದಿ, ತಮ್ಮ ನಾಲ್ಕು ವರ್ಷದ ಸಾಧನೆ ಏನು ಎಂದು ಜನರ ಮುಂದೆ ಇಡಲಿ. 56 ಇಂಚಿನ ಎದೆ ಇದ್ದರೆ ಸಾಲದು, ಉತ್ತಮ ಆಡಳಿತ ಕೊಡುವ ಗುಣ ಹೊಂದಿರಬೇಕು ಎಂದು ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರಧಾನಿ ಮೋದಿ ಅವರ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಸಂವಿಧಾನ ಉಳಿವಿಗಾಗಿ ಕರ್ನಾಟಕ ರಾಜ್ಯಮಟ್ಟದ ವೇದಿಕೆಯಿಂದ ನಡೆಯುತ್ತಿರುವ ಜನಾಂದೋಲನದಲ್ಲಿ ಭಾಗಿಯಾಗಿರುವ ಜಿಗ್ನೇಶ್ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ,’ ಪ್ರಧಾನಿ ಮೋದಿ ಪ್ರಧಾನಿಯಾದ ಮೇಲೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಜನತೆಗೆ ತಿಳಿಸಬೇಕಿದೆ. ದೇಶ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆ, ರೈತರ ಆತ್ಮಹತ್ಯೆ, ದಲಿತರ ಮೇಲಿನ ದೌರ್ಜನ್ಯ, ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಇಷ್ಟೆಲ್ಲಾ ಸಂಕಷ್ಟಗಳನ್ನು ಎದುರಿಸುತ್ತಿರುವ ಮೋದಿ ನನ್ನ ಜೊತೆ ನಾಲ್ಕು ನಿಮಿಷ ಚರ್ಚೆ ನಡೆಸಲಿ ಎಂದು ಹೇಳಿದ್ದಾರೆ.


‘ಗುಜರಾತ್ ಮಾಡೆಲ್ ಮೋದಿ ಎಂದು ಹೇಳುವವರಿಗೆ ನಾಚಿಕೆಯಾಗಬೇಕು. ಗುಜರಾತ್ ನ ವಿಧಾನಸೌದದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರು, ಜವಾನರು ವಸತಿ ಇಲ್ಲದೆ ನೋವು ಅನುಭವಿಸುತ್ತಿದ್ದಾರೆ. ವಸತಿ ಇರಲಿ, ಅವರಿಗೆ ಸಮಾನ ವೇತನ ಕೂಡ ನೀಡುವುದಿಲ್ಲ. ಇದುವಾ ಗುಜರಾತ್ ಮಾಡೆಲ್ ‘ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments