ಜಿಪಂ,ತಾಪಂ ಚುನಾವಣೆ : ಈಶ್ವರಪ್ಪ

Webdunia
ಮಂಗಳವಾರ, 29 ಮಾರ್ಚ್ 2022 (07:54 IST)
ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ಪೆಂಡಿಂಗ್ ಇದೆ.

ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಕಮಿಟಿ ಮಾಡಿದ್ದೀರಿ, ಇನ್ನೂ ವರದಿ ನೀಡಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಈಶ್ವರಪ್ಪ ಉತ್ತರಿಸುವಾಗ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ, ಈ ಹಿಂದೆ ಕ್ಯಾಬಿನೆಟ್ ಸಬ್ ಕಮಿಟಿ ಆಗಿತ್ತು,

ನಾನೂ ಕೂಡ ಸದಸ್ಯನಾಗಿದ್ದೆ , ರವಿವರ್ಮಕುಮಾರ್ ಜೊತೆ ಕೂತು ಫಾರ್ಮುಲಾ ರೆಡಿ ಮಾಡಿದ್ದೆವು. ಅದರ ಪ್ರಕಾರ 26.4% ಬಿಸಿಎಂಎ, 6.6%ಬಿಸಿಎಂಬಿ ಮಾಡಿ, 33% ಮಹಿಳೆಯರಿಗೆ ಮಾಡಿತ್ತು. ಬಳಿಕ ಮಹಿಳೆಯರಿಗೆ 50% ಆಯ್ತು. 30% ಈಗ ಹಿಂದುಳಿದವರಿಗೆ ನೀಡಲಾಗಿದೆ.

ಇದೆಲ್ಲ ಹೋಗಿ ಜನರಲ್ ಕ್ಯಾಟಗಿರಿಯವರು ಹೋಗಬೇಕಿದೆ. ಇದಕ್ಕೆ ಸರ್ಕಾರ ಏನು ಯೋಜನೆ ಮಾಡಿದ್ದೀರಾ ಅಂತ ಪ್ರಶ್ನೆ..? ಹಿಂದುಳಿದ ಜಾತಿಯವರಿಗೆ ರಾಜಕೀಯ ಮೀಸಲಾತಿಯಲ್ಲಿ ಅನ್ಯಾಯ ಆಗಬಾರದು. ಕರ್ನಾಟಕದಲ್ಲಿ 33%ಮೀಸಲಾತಿ ಇದೆ.

ಎಸ್.ಟಿ. 3%, 15% ಎಸ್ಸಿ, 33% ಹಿಂದುಳಿದ ವರ್ಗ. ಒಟ್ಟು 51% ಮೀಸಲಾತಿ ಇದೆ. ರಿಸರ್ವೇಷನ್ ಇಲ್ಲದಿದ್ರೆ ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗಲಿದೆ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ರು.  

ಆಗ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಸಚಿವ ಈಶ್ವರಪ್ಪ ಉತ್ತರ ನೀಡಿ, ತಾ.ಪಂ, ಜಿ.ಪಂ ಚುನಾವಣೆ ಹೇಗೆ ನಡೆಯಬೇಕು ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ನಿಟ್ಟಿನಲ್ಲಿ ಏನೇನು ಮಾಡಬೇಕು ಅಂತಾ ನಾಲ್ಕು ಬಾರಿ ಕಾನೂನು ಸಚಿವರು, ಕ್ಯಾಬಿನೆಟ್ ಸಚಿವರ ಸಭೆ ನಡೆಸಲಾಗಿತ್ತು.

ಸರ್ವ ಪಕ್ಷ ಸಭೆ ಕೂಡ ಮಾಡಲಾಗಿದೆ, ವಿಪಕ್ಷ ನಾಯಕರು ಮತ್ತೆ 31ರಂದು ಸರ್ವಪಕ್ಷ ಸಭೆ ಕರೆಯಲು ಮನವಿ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗಬಾರದು, ಈ ಚುನಾವಣೆ ಸಂದರ್ಭದಲ್ಲಿ ಆಡಳಿತ, ವಿಪಕ್ಷ ಅಂತ ಪಕ್ಷ ನೋಡಲು ಆಗಲ್ಲ. 31ರಂದು ಎಲ್ಲರೂ ಕೂತು ಚರ್ಚೆ ಮಾಡೋಣ. ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳೋಣ, ನಂತರ ಚುನಾವಣೆಗೆ ಹೋಗೋಣ ಅಂತಾ ಈಶ್ವರಪ್ಪ ಸ್ಪಷ್ಟನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments