ರಾಹುಲ್ ಗಾಂಧಿಯನ್ನು ಭೇಟಿಯಾದ ಕನ್ಹಯ್ಯ ಕುಮಾರ್, ಕಾಂಗ್ರೆಸ್ ಸೇರುವ ಸಾಧ್ಯತೆ

Webdunia
ಗುರುವಾರ, 16 ಸೆಪ್ಟಂಬರ್ 2021 (12:13 IST)
ಹೊಸದಿಲ್ಲಿ:  ಸಿಪಿಐ ಯುವ ನಾಯಕ ಹಾಗೂ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಮೂಲಗಳ ಪ್ರಕಾರ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೂಡ ಕಾಂಗ್ರೆಸ್ ನಾಯಕತ್ವದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು indianexpress.com ವರದಿ ಮಾಡಿದೆ.
Photo Courtesy: Google

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೇವಾನಿಗೆ ಉತ್ತರ ಗುಜರಾತ್ನ ಬನಸ್ಕಾಂತ ಜಿಲ್ಲೆಯ ವಡ್ಗಾಮ್ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನು ನಿಲ್ಲಿಸದೆ ಕಾಂಗ್ರೆಸ್ ಅವರ ಗೆಲುವಿಗೆ ಸಹಾಯ ಮಾಡಿತ್ತು. ಕನ್ಹಯ್ಯ ಕುಮಾರ್ ಅವರಿಗೆ ಸಿಪಿಐನಲ್ಲಿ ಉಸಿರುಗಟ್ಟಿದ ಭಾವನೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ ಎಂದು indianexpress.com ವರದಿ ಮಾಡಿದೆ.
ಕುಮಾರ್ ಅವರು ಮಂಗಳವಾರ ಗಾಂಧಿಯವರನ್ನು ಭೇಟಿಯಾದರು ಹಾಗೂ ಅವರ ಕಾಂಗ್ರೆಸ್ ಪ್ರವೇಶದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಕುಮಾರ್ ಅವರ ನಿರ್ಗಮನದ ಬಗ್ಗೆ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಅವರನ್ನು ಕೇಳಿದಾಗ, ಈ ವಿಷಯದಲ್ಲಿ ಊಹಾಪೋಹಗಳನ್ನು ಮಾತ್ರ ಕೇಳಿದ್ದೇನೆ ಎಂದು ಹೇಳಿದರು.
"ಅವರು ಈ ತಿಂಗಳ ಆರಂಭದಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಾಜರಿದ್ದರು ಎಂದು ಮಾತ್ರ ನಾನು ಹೇಳಬಲ್ಲೆ. ಅವರು ಸಭೆಯಲ್ಲಿ ಮಾತನಾಡಿದ್ದರು ಹಾಗೂ ಚರ್ಚೆಗಳಲ್ಲಿ ಭಾಗವಹಿಸಿದ್ದರು" ಎಂದು ರಾಜಾ ಹೇಳಿದರು.
ಕುಮಾರ್ ಹಾಗೂ ಮೇವಾನಿ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಲ್ಲಿ ಹೊಸ ಶಕ್ತಿ ಬಲ ಬರಲಿದೆ ಎಂದು ನಂಬಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ, ಸುಶ್ಮಿತಾ ದೇವ್, ಜಿತಿನ್ ಪ್ರಸಾದ ಹಾಗೂ ಪ್ರಿಯಾಂಕ ಚತುರ್ವೇದಿಯವರಂತಹ ಯುವ ನಾಯಕ, ನಾಯಕಿಯರು ಪಕ್ಷವನ್ನು ತೊರೆದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments