ಬಿಜೆಪಿ ಜಾಹೀರಾತಿಗೆ ಆಯೋಗ ತಡೆ ನೀಡಿದ್ದಕ್ಕೆ ಕಿಡಿಕಾರಿದ ಶೋಭಾ ಕರಂದ್ಲಾಜೆ

Webdunia
ಶನಿವಾರ, 28 ಏಪ್ರಿಲ್ 2018 (14:31 IST)
ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಬಿಜೆಪಿಯ ಜಾಹೀರಾತುಗಳಿಗೆ ಚುನಾವಣಾ ಆಯೋಗ ತಡೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಶೋಭಾ ಕರಂದ್ಲಾಜೆ ಅವರು ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ ಬಿಜೆಪಿ ಜನವಿರೋಧಿ ಸರ್ಕಾರ, ಮೂರು ಭಾಗ್ಯ, ವಿಫಲ ಸರ್ಕಾರದ ಹೆಸರಲ್ಲಿ ಜಾಹೀರಾತು ತಯಾರಿಸಿತ್ತು. ಈ ಜಾಹೀರಾತಿನ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಕಾರಣ ಚುನಾವಣಾ ಆಯೋಗ ಮೂರು ಜಾಹೀರಾತನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. 
 
ಇದರಿಂದ ಕೋಪಗೊಂಡ ಶೋಭಾ ಕರಂದ್ಲಾಜೆ ಅವರು,’ ಜಾಹೀರಾತುಗಳಿಗೆ ಆಯೋಗದ ಅನುಮತಿ ಪಡೆದಿದ್ದೇವೆ. ಉಗ್ರಪ್ಪನವರಿಗೆ ಬಿಜೆಪಿ ಜಾಹೀರಾತಿನ ಮೇಲೆ ಹೊಟ್ಟೆ ಉರಿಯಾಗಿದ್ದು. ಅದಕ್ಕೆ ದೂರು ಕೊಟ್ಟಿದ್ದಾರೆ. ಚುನಾವಣಾ ಆಯೋಗ ಅನುಮತಿ ನೀಡಿ, ಕೆಲ ಬದಲಾವಣೆಗಳನ್ನ ಹೇಳಿ ಈಗ ತಡೆ ಕೊಟ್ಟಿರುವುದು ಸರಿಯಲ್ಲ. ಚುನಾವಣಾ ಆಯೋಗ ಜಾಹಿರಾತುಗಳನ್ನು ಮರು ಪರಿಶೀಲನೆ ಮಾಡಬೇಕು. ಏಕಪಕ್ಷೀಯ ನಿರ್ಧಾರದಂತೆ ಕಾಣಿಸುತ್ತಿದೆ. ಅಧಿಕಾರಿಗಳು ಏಕಪಕ್ಷೀಯವಾಗಿ ನಡೆದುಕೊಳ್ಳಬಾರದು. ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments