Webdunia - Bharat's app for daily news and videos

Install App

ಸಂತ್ರಸ್ತರಿಗೆ ಬಿಸ್ಕಟ್ ಎಸೆದ ಸಚಿವ ಎಚ್ ಡಿ ರೇವಣ್ಣಗೆ ಸೋಷಿಯಲ್ ಮೀಡಿಯಾದಲ್ಲಿ ತಪರಾಕಿ

Webdunia
ಮಂಗಳವಾರ, 21 ಆಗಸ್ಟ್ 2018 (08:50 IST)
ಬೆಂಗಳೂರು: ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಬಿಸ್ಕತ್ ವಿತರಿಸುವಾಗ ಎಸೆದ ಸಚಿವ ಎಚ್ ಡಿ ರೇವಣ್ಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಹಾಸನ ಹಾಲು ಒಕ್ಕೂಟದ ವತಿಯಿಂದ ನೀಡಲಾದ ಬಿಸ್ಕತ್ ಗಳನ್ನು ಸಚಿವರು ಸಂತ್ರಸ್ತರ ಕಡೆಗೆ ಎಸೆಯುವ ದೃಶ್ಯಗಳ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ನೋಡಿದ ಜನ ಈಗ ಸಚಿವ ರೇವಣ್ಣಗೆ ಹಿಡಿಶಾಪ ಹಾಕುತ್ತಿದ್ದಾರೆ.

ಒಬ್ಬ ಸಚಿವರಾಗಿ ಬಿಸ್ಕತ್ ಎಸೆಯುವ ದರ್ಪ ತೋರಿದ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಟೀಕೆ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ನಾಯಕರೇ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಷ್ಟೆಲ್ಲಾ ಆದರೂ ಸಿಎಂ ಕುಮಾರಸ್ವಾಮಿ ಮಾತ್ರ ತಮ್ಮ ಸಹೋದರನ ಬೆಂಬಲಕ್ಕೆ ನಿಂತಿದ್ದಾರೆ. ರೇವಣ್ಣ ದುರಹಂಕಾರದಿಂದ ವರ್ತಿಸಿಲ್ಲ. ಹಾಸನದಿಂದ ಸಂತ್ರಸ್ತರಿಗೆ ಹಾಲು-ಬಟ್ಟೆ ವಿತರಿಸಲಾಗಿದೆ. ಈ ದೃಶ್ಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಸಿಎಂ ತಿಪ್ಪೆ ಸಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments