Select Your Language

Notifications

webdunia
webdunia
webdunia
webdunia

ಕರುಣಾನಿಧಿ ಆರೋಗ್ಯದಲ್ಲಿ ಅಲ್ಪ ಚೇತರಿಕೆ

ಕರುಣಾನಿಧಿ ಆರೋಗ್ಯದಲ್ಲಿ ಅಲ್ಪ ಚೇತರಿಕೆ
ಚೆನ್ನೈ , ಮಂಗಳವಾರ, 31 ಜುಲೈ 2018 (09:04 IST)
ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜ್ವರ, ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ರಕ್ತದೊತ್ತಡ ಏರುಪೇರಾದ ಹಿನ್ನಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಭಾನುವಾರ ರಾತ್ರಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿಗೆ ತಲುಪಿತ್ತು.

ಈ ವೇಳೆ ಆಸ್ಪತ್ರೆಯ ಸುತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಂದೂ ಕೂಡಾ ಅಭಿಮಾನಿಗಳು ಆಸ್ಪತ್ರೆಯ ಹೊರಗೆ ತಮ್ಮ ನೆಚ್ಚಿನ ನಾಯಕನ ಆರೋಗ್ಯ ಸ್ಥಿತಿ ಬಗ್ಗೆ ತಿಳಿಯಲು ಗುಂಪು ಸೇರಿದ್ದಾರೆ.

ಕರುಣಾನಿಧಿ ಕುಟುಂಬ ವರ್ಗ ಆಸ್ಪತ್ರೆಯಲ್ಲೇ ಇದೆ. ಇಂದು ಕರುಣಾನಿಧಿಯವರನ್ನು ಭೇಟಿ ಮಾಡಿರುವ ಡಿಎಂಕೆ ನಾಯಕ ಎ ರಾಜಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಈಗಲೂ ಐಸಿಯುವಿನಲ್ಲೇ ತಜ್ಞ ವೈದ್ಯರ ತಂಡ ಕರುಣಾನಿಧಿಗೆ ಚಿಕಿತ್ಸೆ ನೀಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿ ಮೇಲೆ ಸಿದ್ಧರಾಮಯ್ಯ ಆಪ್ತರ ಕೆಂಗಣ್ಣು