Webdunia - Bharat's app for daily news and videos

Install App

ಕಾಂಗ್ರೆಸ್ ಸಚಿವರು ರಾಜಕೀಯ ಮಾತಾಡೋ ಹಾಗಿಲ್ಲ! ಕೆಸಿ ವೇಣುಗೋಪಾಲ್ ತಾಕೀತು

Webdunia
ಸೋಮವಾರ, 2 ಜುಲೈ 2018 (09:26 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ತನ್ನ ಸಚಿವರಿಗೆ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಇನ್ಮುಂದೆ ಸಚಿವರು ಬಹಿರಂಗವಾಗಿ ರಾಜಕೀಯ ವಿಚಾರಗಳ ಬಗ್ಗೆ ಹೇಳಿಕೆ ಕೊಡುವಂತಿಲ್ಲ ಎಂದು ಖಡಕ್ ಸೂಚನೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ನೀಡಿದ್ದಾರೆ.

ಬಜೆಟ್ ಮಂಡನೆ ವಿಚಾರದಲ್ಲಿ ಸಿದ್ದರಾಮಯ್ಯ ನೀಡಿದ್ದಾರೆಂಬ ಹೇಳಿಕೆಯ ವಿಡಿಯೋ ವೈರಲ್ ಆದ ಮೇಲೆ ನಡೆದ ವಿದ್ಯಮಾನಗಳ ನಂತರ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ತನ್ನ ಸಚಿವರಿಗೆ ಇಂತಹದ್ದೊಂದು ಖಡಕ್ ಸಂದೇಶ ರವಾನಿಸಿದೆ.

‘ಸಚಿವರುಗಳು ತಮ್ಮ ಇಲಾಖೆಯ ಯೋಜನೆಗಳ ಕುರಿತು, ಸಾರ್ವಜನಿಕವಾಗಿ ಮಾತನಾಡಿದರೆ ಸಾಕು. ಅದರ ಹೊರತಾಗಿ ರಾಜಕೀಯ ವಿಚಾರವಾಗಿ ಬಹಿರಂಗ ಹೇಳಿಕೆ ಕೊಡಬಾರದು’ ಎಂದು ಸಮನ್ವಯ ಸಮಿತಿ ಸಭೆ ನಂತರ ಹೇಳಿದ್ದಾರೆ.

ಇನ್ಮುಂದೆ ಸಮ್ಮಿಶ್ರ ಸರ್ಕಾರದ ಮಾಹಿತಿ ನೀಡಲು ಎರಡೂ ಪಕ್ಷಗಳ ಪರವಾಗಿ ಇಬ್ಬರು ವಕ್ತಾರರನ್ನು ನೇಮಿಸಲಾಗುವುದು. ಅವರೇ ಎಲ್ಲಾ ಅಧಿಕೃತ ಹೇಳಿಕೆ ನೀಡುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments