ಕೇರಳ ಪ್ರವಾಹ: 6 ಜನ ಸಾವು, 12 ಜನ ಕಣ್ಮರೆ

Webdunia
ಭಾನುವಾರ, 17 ಅಕ್ಟೋಬರ್ 2021 (14:55 IST)
ಕೇರಳ (ಅ 17 ) ; ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ  ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ ಮತ್ತು ಸಣ್ಣ ಪಟ್ಟಣಗಳು ದ್ವೀಪದಂತಾಗಿವೆ. ಅನೇಕ ಗ್ರಾಮಗಳು ಹೊರಗಿನ ಪ್ರಪಂಚದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡಿವೆ.
ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಮತ್ತು ರಾಜ್ಯದ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನವನ್ನು ಸಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳ ಎದುರು ಮಾತನಾಡಿರುವ ಪಿಣರಾಯಿ ವಿಜಯನ್, " ರಾಜ್ಯದ ಪರಿಸ್ಥಿತಿ ಗಂಭೀರವಾಗಿದೆ. ಆದರೆ, ಇತ್ತೀಚಿನ ಹವಾಮಾನ ವರದಿಗಳು ಶೀಘ್ರದಲ್ಲೇ ಮಳೆ ನಿಲ್ಲಲಿದೆ ಎಂದು ಸೂಚಿಸಿದ್ದು ಪರಿಸ್ಥಿತಿಯು ಇನ್ನಷ್ಟು ಹದಗೆಡುವ ಲಕ್ಷಣಗಳನ್ನು ಗೋಚರಿಸುತ್ತಿಲ್ಲ. ಹೀಗಾಗಿ ಈ ಪ್ರವಾಹವನ್ನು ಶೀಘ್ರದಲ್ಲೇ ನಿಭಾಯಿಸಲಾಗುವುದು" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಗೋಮೂತ್ರವೆಂದು ತಮಾಷೆ ಮಾಡಿದ್ದ ಪ್ರಿಯಾಂಕ ಗಾಂಧಿ: ನೀವೂ ಸ್ವಲ್ಪ ಬಳಸಿ ಶುದ್ಧರಾಗ್ತೀರಿ ಎಂದ ಅನುರಾಗ್ ಠಾಕೂರ್ Video

ಅಲ್ಲಾರೀ.. ಬಾಂಗ್ಲಾ ಅಕ್ರಮ ವಲಸಿಗನಿಗಾಗಿ ಭಾರತೀಯನನ್ನು ಬಂಧಿಸುತ್ತೀರಾ: ಗೃಹ ಇಲಾಖೆಗೆ ಪರೋಕ್ಷ ಚಾಟಿ ಬೀಸಿದ ನ್ಯಾ. ನಾಗಪ್ರಸನ್ನ

ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

ಕಾಕ್ರೋಚ್ ಪಾರ್ಟಿ ಸುಪ್ರೀಂಕೋರ್ಟ್ ನಿಂದಲೂ ದೊಡ್ಡವರೇ: ಸೌರವ್ ದಾಸ್ ಹೇಳಿಕೆಗೆ ನೆಟ್ಟಿಗರ ಕಿಡಿ video

ಮುಂದಿನ ಸುದ್ದಿ
Show comments