ಕೇರಳ ಪ್ರವಾಹ: 6 ಜನ ಸಾವು, 12 ಜನ ಕಣ್ಮರೆ

Webdunia
ಭಾನುವಾರ, 17 ಅಕ್ಟೋಬರ್ 2021 (14:55 IST)
ಕೇರಳ (ಅ 17 ) ; ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ  ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ ಮತ್ತು ಸಣ್ಣ ಪಟ್ಟಣಗಳು ದ್ವೀಪದಂತಾಗಿವೆ. ಅನೇಕ ಗ್ರಾಮಗಳು ಹೊರಗಿನ ಪ್ರಪಂಚದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡಿವೆ.
ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಮತ್ತು ರಾಜ್ಯದ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನವನ್ನು ಸಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳ ಎದುರು ಮಾತನಾಡಿರುವ ಪಿಣರಾಯಿ ವಿಜಯನ್, " ರಾಜ್ಯದ ಪರಿಸ್ಥಿತಿ ಗಂಭೀರವಾಗಿದೆ. ಆದರೆ, ಇತ್ತೀಚಿನ ಹವಾಮಾನ ವರದಿಗಳು ಶೀಘ್ರದಲ್ಲೇ ಮಳೆ ನಿಲ್ಲಲಿದೆ ಎಂದು ಸೂಚಿಸಿದ್ದು ಪರಿಸ್ಥಿತಿಯು ಇನ್ನಷ್ಟು ಹದಗೆಡುವ ಲಕ್ಷಣಗಳನ್ನು ಗೋಚರಿಸುತ್ತಿಲ್ಲ. ಹೀಗಾಗಿ ಈ ಪ್ರವಾಹವನ್ನು ಶೀಘ್ರದಲ್ಲೇ ನಿಭಾಯಿಸಲಾಗುವುದು" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments