Webdunia - Bharat's app for daily news and videos

Install App

‘ಕೆಜಿಫ್-2’ ಆಡಿಯೋ ರೇಟ್ ಕೇಳುದ್ರೆ ಶಾಕ್ ಆಗ್ತೀರಾ!

ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್; ಲಹರಿ ಸಂಸ್ಥೆ ಪಾಲಾದ ಯಶ್ ಸಿನಿಮಾ ಸಾಂಗ್ಸ್

Webdunia
ಗುರುವಾರ, 1 ಜುಲೈ 2021 (13:55 IST)
Bangalore: ಕೆಜಿಎಫ್ 2 ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಕೆಜಿಎಫ್ 1ಗಿಂತಲೂ ಭರ್ಜರಿ ಮೊತ್ತಕ್ಕೆ ಮಾರಾಟವಾಗಿದೆ.ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರದ ಹಾಡುಗಳ ರೈಟ್ಸ್ ಸೇಲ್ ಆಗಿದೆ.



ಹೆಸರಾಂತ ಆಡಿಯೋ ಸಂಸ್ಥೆ ಲಹರಿ ಆಡಿಯೋಸ್ ಕಂಪನಿಯ ಪಾಲಾಗಿದೆ. ಕೆಜಿಎಫ್ 2 ಸಿನಿಮಾದ ಹಾಡುಗಳನ್ನು ಲಹರಿ ಸಂಸ್ಥೆ  ದಾಖಲೆ ಮೊತ್ತಕ್ಕೆ ಖರೀದಿಸಿದೆ.ಇವತ್ತು ಲಹರಿ ಆಡಿಯೋ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಹಾಗೂ ಲಹರಿ ವೇಲು ಅವರನ್ನು ಭೇಟಿಯಾದ ನಿರ್ಮಾಪಕ ವಿಜಯ್ ಕಿರಗಂದೂರ್ ಕೆಜಿಎಫ್ 2  ಚಿತ್ರದ ಆಡಿಯೋ ರೈಟ್ಸ್ ಮಾರಾಟದ ಪ್ರತಿಯನ್ನು ಹಸ್ತಾಂತರಿಸಿದ್ದಾರೆ.
ಪ್ರಶಾಂತ್ ನೀಲ್  ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್  ನಾಯಕನಾಗಿ ನಟಿಸಿರುವ ಹೊಂಬಾಳೆ ಫಿಲ್ಮ್ಸ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ಬಹುನಿರೀಕ್ಷಿತ ಕೆಜಿಎಫ್ 2 (KGF 2)  ಚಿತ್ರ ತೆರೆಗೆ ಬರಲು ರೆಡಿಯಾಗಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬಿಜಿಯಾಗಿರುವ ಚಿತ್ರತಂಡ ಸದ್ಯ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಿದೆ.
ಕೆಜಿಎಫ್ 1  ಚಿತ್ರದ ಆಡಿಯೋ ಹಕ್ಕುಗಳನ್ನು ಲಹರಿ ಸಂಸ್ಥೆಯೇ ಖರೀದಿಸಿತ್ತು. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಹೀಗೆ ಒಟ್ಟು ಐದು ಭಾಷೆಗಳಿಂದ ಬರೋಬ್ಬರಿ ಮೂರೂವರೆ ಕೋಟಿ ರೂಪಾಯಿಗಳನ್ನು ನೀಡಿತ್ತು. ಈಗ ಕೆಜಿಎಫ್ 2 ಚಿತ್ರದ ಹಾಡುಗಳನ್ನು ಸಹ ಲಹರಿ ಸಂಸ್ಥೆಯೇ ಖರೀದಿ ಮಾಡಿದೆ.
ಕೆಜಿಎಫ್ 2 ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಕೆಜಿಎಫ್ 1 ಗಿಂತಲೂ ಭರ್ಜರಿ ಮೊತ್ತಕ್ಕೆ ಮಾರಾಟವಾಗಿದೆ ಎನ್ನಲಾಗಿದೆ. ಆ ಮೂಲಕ ರಿಲೀಸ್ಗೂ ಮುನ್ನವೇ ಕೆಜಿಎಫ್ ಚಿತ್ರ ಹೊಸ ದಾಖಲೆ ನಿರ್ಮಿಸಿದೆ.

ಕೆಜಿಎಫ್ 1 ನಂತೆಯೇ ಕೆಜಿಎಫ್ 2 ಚಿತ್ರ ಸಹ ಸಾಕಷ್ಟು ನಿರೀಕ್ಷೆ, ಕುತೂಹಲ ಹುಟ್ಟುಹಾಕಿದೆ. ಸ್ಟಾರ್ ಸಹ ಅದ್ದೂರಿಯಾಗಿದ್ದು ಅಧೀರರಾಗಿ ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ರಿಮಿಕಾ ಸೇನ್ ಪಾತ್ರದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್, ತೆಲುಗು ನಟ ರಾವ್ ರಮೇಶ್ ಹಾಗೂ ಪ್ರಕಾಶ್ ರಾಜ್ ಪ್ರಮುಖ ತಾರಾಗಣದಲ್ಲಿ ನಟಿಸಿದ್ದಾರೆ. ಈಗಾಗಲೇ ಸಂಜಯ್ ದತ್ ಅವರ ಅಧೀರ ಪಾತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಕೆಜಿಎಫ್ 2 ಬಗೆಗಿನ ಎಕ್ಸ್ಪೆಕ್ಟೇಷನ್ಸ್ ಅನ್ನ ಜಾಸ್ತಿ ಮಾಡಿದೆ. ಮಾತ್ರವಲ್ಲ ಭಾರತದ ಪ್ರಧಾನಿ ರಮಿಕಾ ಸೆನ್ ಪಾತ್ರದಲ್ಲಿ ಪಾತ್ರದಲ್ಲಿ ರವೀನಾ ಟಂಡನ್ ಅವರು ನಟಿಸಿದ್ದು, ಅವರ ಲುಕ್ ಕೂಡ ಸಾಕಷ್ಟು ಕುತೂಹಲ ಮೂಡಿಸುವಂತಿದೆ.
ಒಟ್ಟಾರೆ ತೆರೆ ಮೇಲೆ ಅಬ್ಬರಿಸಿ ಬೊಬ್ಬಿರಿಯಲು ರಾಕಿಬಾಯ್ ರೆಡಿ ಆಗಿದ್ದಾನೆ. ಆದರೆ ಅದಕ್ಕೂ ಮುನ್ನ ಹಾಡುಗಳ ಮೂಲಕ ರಂಜಿಸಲು ಸಿದ್ಧತೆ ನಡೆಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

ಮುಂದಿನ ಸುದ್ದಿ
Show comments