ಕೊವಿಡ್ 19: ಎಚ್ಚರಿಕೆ ನೀಡಿದ ವಿಜ್ಞಾನಿಗಳು!

Webdunia
ಬುಧವಾರ, 22 ಡಿಸೆಂಬರ್ 2021 (09:09 IST)
ದೆಹಲಿ : ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ 2022ರ ಫೆಬ್ರವರಿಯಲ್ಲಿ ಉತ್ತುಂಗಕ್ಕೆ ಏರುವ ಸಾಧ್ಯತೆ ಹೆಚ್ಚಾಗಿದೆ.

ಇದೀಗ ಶುರುವಾಗಿರುವ ಒಮಿಕ್ರಾನ್ ಪ್ರಸರಣವೇ ಕೊವಿಡ್ 19 ಮೂರನೇ ಅಲೆಗೆ ಕಾರಣವಾಗಲಿದ್ದು, ಆದರೆ ಈ ಅಲೆ 2ನೇ ಅಲೆಯಷ್ಟು ಭೀಕರವಾಗಿ ಇರುವುದಿಲ್ಲ. ಸ್ವಲ್ಪ ಸೌಮ್ಯವಾಗಿ ಇರಲಿದೆ ಎಂದು ದೇಶದ ಕೊವಿಡ್ 19 ಪಥವನ್ನು ಟ್ರ್ಯಾಕ್ ಮಾಡುವಲ್ಲಿ ಸಕ್ರಿಯರಾಗಿರುವ ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಒಮಿಕ್ರಾನ್ ಡೆಲ್ಟಾಕ್ಕಿಂತಲೂ ಮೂರು ಪಟ್ಟು ಹೆಚ್ಚು ಪ್ರಸರಣಗೊಳ್ಳುತ್ತಿದೆ. ಅದು ಲಸಿಕೆಯ ದಕ್ಷತೆಯನ್ನೇ ಕುಗ್ಗಿಸುತ್ತಿದೆ. ಹೀಗಾಗಿ ಭಾರತದಲ್ಲಿ ಫೆಬ್ರವರಿ ಹೊತ್ತಿಗೆ ದಿನಕ್ಕೆ 1.5 ಲಕ್ಷ ದಿಂದ 1.8 ಲಕ್ಷದವರೆಗೆ ಕೊರೊನಾ ಪ್ರಕರಣಗಳು ಪತ್ತೆಯಾಗಬಹುದು ಎಂದು  ಐಐಟಿ ಕಾನ್ಪುರದ ಮನೀಂದ್ರ ಅಗರವಾಲ್ ಮತ್ತು ಐಐಟಿ ಹೈದರಾಬಾದ್ನ ಎಂ ವಿದ್ಯಾಸಾಗರ್ ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಒಮಿಕ್ರಾನ್ ಪ್ರಸರಣದ ವೇಗ ಅತ್ಯಂತ ಹೆಚ್ಚಾಗಿರುವ ಕಾರಣ, ದಿನಕ್ಕೆ 1.7-1.8 ಲಕ್ಷ ಕೇಸ್ವರೆಗೂ ದಾಖಲಾಗಬಹುದು ಎಂಬುದು ಆರೋಗ್ಯ ತಜ್ಞರ ಎಚ್ಚರಿಕೆ. ಭಾರತದಲ್ಲಿ ಕೊವಿಡ್ 19 ಎರಡನೇ ಅಲೆ ಅತ್ಯಂತ ಭೀಕರವಾಗಿತ್ತು.

ದಿನಕ್ಕೆ 4 ಲಕ್ಷ ಕೊರೊನಾ ಕೇಸ್ಗಳೂ ದಾಖಲಾದ ಉದಾಹರಣೆ ಇತ್ತು. ಆಕ್ಸಿಜನ್, ಬೆಡ್ಗಳ ಕೊರತೆ ಎದುರಾಗಿತ್ತು. ಆದರೆ ಈ ಬಾರಿ ಅಂಥ ಅಪಾಯಗಳಿಗೆ ಅವಕಾಶ ಕೊಡಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಸ್ ಕ್ರೀಂ ನಂಗೂ ಕೊಡೋ.. ಮಾವುತನ ಬಳಿ ಕ್ಯೂಟ್ ಆಗಿ ಐಸ್ ಕ್ರೀಂ ಕೇಳಿದ ಆನೆ Video

ಕುಳಿತಿದ್ದ ಗುಂಪಿನವರ ಮೇಲೆ ಏಕಾಏಕಿ ದಾಳಿ ನಡೆಸಿದ ಒಂಟಿ ನಾಯಿ, Video

ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಅಸ್ಸಾಂ ಸಿಎಂ, ಇದೆಲ್ಲ ವರ್ಕ್ ಆಗಲ್ಲ

ಮುಂದಿನ ಸುದ್ದಿ
Show comments