Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಕೋವಿಡ್ ಏರಿಕೆ!

Webdunia
ಶುಕ್ರವಾರ, 17 ಜೂನ್ 2022 (07:06 IST)
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ? ಜನ ಏನು ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ.

ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ ಬರುವವರಿಗೆ ರ್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಆದ ಎಲ್ಲಾ ಸ್ವಾಬ್ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗಾಗಿ ರವಾನೆ ಮಾಡಬೇಕು. 

ಪಾಸಿಟಿವ್ ಆಗಿದ್ರೆ ಅಥವಾ ರಿಪೋರ್ಟ್ ಬರುವವದಿದ್ದರೆ, ವ್ಯಕ್ತಿಯನ್ನ ಕ್ವಾರಂಟೈನ್ ಮಾಡಬೇಕು. ಕ್ವಾರಂಟೈನ್ ಅವಧಿ ಮುಗಿಯುವವರೆಗೂ ವೈದ್ಯರು ನಿಗಾ ಇಡಬೇಕು. ಎಲ್ಲಾ ಐಎಲ್ಐ ಸ್ಯಾರಿ ಕೇಸ್ಗಳ ಡೇಟಾವನ್ನು ಐಡಿಎಸ್ನಲ್ಲಿ ಅಪ್ಲೋಡ್ ಮಾಡಬೇಕು. ಆಸ್ಪತ್ರೆಗಳಿಗೆ ಐಎಲ್ಐ ಕೇಸ್ಗಳು ದಾಖಲಾದರೆ ಆರ್ಟಿ-ಪಿಸಿಆರ್ ಟೆಸ್ಟ್ ಮಾಡಬೇಕು.

ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಸೆರೋ ಸರ್ವೆ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 14 ವರ್ಷದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೇಗಿದೆ. ಈಗಾಗಲೇ ಕೋವಿಡ್ ಬಂದು ಹೋಗಿದೆಯಾ ಹೇಗೆ ಅಂತಾ ಸೆರೋ ಸರ್ವೆ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಗದಿತ ಸಮಯದಲ್ಲಿ ಸೆರೋ ಸರ್ವೆ ಮಾಡಲು ಸೂಚನೆ ನೀಡಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments