Webdunia - Bharat's app for daily news and videos

Install App

ಚುನಾವಣೆ ಆಯೋಗಕ್ಕೆ ಸೆಡ್ಡು ಹೊಡೆದ ಕೆ.ಎಸ್.ಈಶ್ವರಪ್ಪ

Webdunia
ಭಾನುವಾರ, 1 ಏಪ್ರಿಲ್ 2018 (14:45 IST)
ನಮ್ಮ ದುಡ್ಡಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಊಟ ಕೊಟ್ಟರೆ ಚುನಾವಣೆ ಆಯೋಗಕ್ಕೆ ಏನ್ ಸಮಸ್ಯೆ, ಲೆಕ್ಕ ಕೊಡಲು ನಾವು ಸಿದ್ದರಾಗಿದ್ದೇವೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಚುನಾವಣಾ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ, ಚುನಾವಣಾ ಅಧಿಕಾರಿಗಳು ಚುನಾವಣ ವೆಚ್ಚ ಎಷ್ಟಿರಬೇಕು ಎಂದು ಈಗಾಗಲೇ ಹೇಳಿದ್ದಾರೆ. ಕಾಗಿನೆಲೆಯಲ್ಲಿ 3 ನೇ ತಾರೀಕ್ ಹಿಂದುಳಿದ ವರ್ಗದ ಸಮಾವೇಶ ನಡೆಯಲಿದೆ. 3 ರಿಂದ 5 ಲಕ್ಷ ಮಂದಿ ಸಮಾವೇಶದಲ್ಲಿ ಸೇರಲಿದ್ದಾರೆ
ಮಜ್ಜಿಗೆ ಕೊಡಲು ಅಬ್ಯಂತರವಿಲ್ಲ ಆದರೆ ಆದರೆ ಊಟ ಕೊಟ್ಟರೆ ಅಡುಗೆ ಸಾಮಾಗ್ರಿ ಸೀಜ್ ಮಾಡಲಾಗುವುದು ಎಂದು ಹೇಳಿದ್ದಾರೆ
 
ನಮ್ಮ ದುಡ್ಡಲ್ಲಿ ಊಟ ಕೊಟ್ಟರೆ ಚುನಾವಣಾ ಆಯೋಗಕ್ಕೆ ಏನು ಸಮಸ್ಯೆ.? ನಾಳೆ 11 ಗಂಟೆ ಒಳಗೆ ಅನುಮತಿ ಕೊಟ್ಟರೆ ಒಳ್ಳೆಯದು ಅನುಮತಿ ಕೊಡದಿದ್ರೆ, ಹಾವೇರಿ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಮಾಡುತ್ತೇನೆ ಎಂದು ಗುಡುಗಿದ್ದಾರೆ.
 
ನಾವು ಮಾಡಿದ ಖರ್ಚಿಗೆ ಲೆಕ್ಕ ಕೊಡಲಿದ್ದೇವೆ. ನ್ಯಾಯ ಸಮ್ಮತ ಚುನಾವಣೆ ನಡೆಯಬೇಕು, ಆದರೆ ಸಮಾವೇಶಕ್ಕೆ ಬಂದವರಿಗೆ ಊಟ ಕೊಡಬಾರದು ಅನ್ನುವ ಧೋರಣೆ ಸರಿಯಲ್ಲ. ಈ ಧೋರಣೆಯನ್ನು ಬದಲಿಸಬೇಕು ಎನ್ನುವುದು ನಮ್ಮ ಒತ್ತಾಯ ಎಂದರು.
 
ನಾನು ಧರಣಿ ಕೂತ ನಂತರ ಒಂದು ನಾನು ಮಾಡಿದ್ದು ತಪ್ಪು ಎಂದು ಗೊತ್ತಾಗಲಿದೆ ಅಥವಾ ಚುನಾವಣಾ ಅಯೋಗ ತನ್ನ ನಿರ್ಧಾರ ಬದಲಿಸಿಕೊಳ್ಳಲಿದೆ
ಚುನಾವಣೆ ಆಯೋಗ ಮಜ್ಜಿಗೆ ಕೊಡಿ ಎಂದು ಹೇಳುತ್ತಿದೆ, ಆದ್ರೆ ಮಜ್ಜಿಗೆಗೆ ಖರ್ಚಾಗುವುದಿಲ್ಲವಾ ? ಪರೋಕ್ಷವಾಗಿ ಖರ್ಚುಮಾಡುವುದಕ್ಕೆ ಬೆಂಬಲ ಕೊಟ್ಟಂತಾಗುವುದಿಲ್ಲವಾ ? ಎಂದು ತಿರುಗೇಟು ನೀಡಿದರು.
 
ಖಾಸಗಿ ಕಟ್ಟಡದ ಮೇಲೆ ಇರುವ ಪ್ರಚಾರ ಫಲಕಗಳನ್ನು ಅಳಿಸಲಾಗುತ್ತಿದೆ. ಇದು ಸರಿಯಲ್ಲ. ರುದ್ರೆಗೌಡರು ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ಕೊಡುವ ವಿಚಾರ ನನಗೆ ಗೊತ್ತಿಲ್ಲ ರುದ್ರೆಗೌಡರನ್ನೆ ಕೇಳಿ ಎಂದು ಹಿರಿಯ ಬಿಜೆಪಿ ಮುಖಂಡ ಈಶ್ವರಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments