Webdunia - Bharat's app for daily news and videos

Install App

ನನ್ನನ್ನು ಖರೀದಿಸುವವರು ಇನ್ನೂ ಹುಟ್ಟಿಲ್ಲ: ಕುಮಾರಸ್ವಾಮಿ ಖಡಕ್ ನುಡಿ

Webdunia
ಗುರುವಾರ, 17 ಮೇ 2018 (08:45 IST)
ಬೆಂಗಳೂರು: ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬಾರದು. ಹಾಗೆ ಮಾಡಿದರೆ ಶಾಸಕರ ಖರೀದಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ‘104 ಶಾಸಕರಿರುವ ಬಿಜೆಪಿಗೆ ಬಹುಮತ ಎಲ್ಲಿದೆ? 2008 ರಲ್ಲಿ ಬಿಜೆಪಿಯವರು ಏನು ಮಾಡಿದ್ದರು? ಈಗ ಮತ್ತೆ ಅವರಿಗೆ ಆಪರೇಷನ್ ಕಮಲ ಮಾಡಲು ಚಿತಾವಣೆ ಕೊಟ್ಟಂತಾಗುತ್ತದೆ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲದೆ ಶಾಸಕರನ್ನು ಖರಿದಿ ಮಾಡಲು ಹೊರಟಿರುವ ಬಿಜೆಪಿ ಮೇಲೆ ಕೆಂಡಾಮಂಡಲಾಗಿರುವ ಎಚ್ ಡಿಕೆ ನನ್ನನ್ನು ಖರೀದಿ ಮಾಡುವವರು ಈವರೆಗೂ ಹುಟ್ಟಿಲ್ಲ ಎಂದು ಗುಡುಗಿದ್ದಾರೆ. ಎರಡು ಮತ್ತು ಮೂರನೇ ಸ್ಥಾನ ಗಳಿಸಿದವರು ಮೈತ್ರಿ ಸರ್ಕಾರ ರಚಿಸಲು ಅವಕಾಶವಿದೆ. ಇದಕ್ಕೆ ಗೋವಾ, ದೆಹಲಿ ಉದಾಹರಣೆ. ಒಂದು ವೇಳೆ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟರೆ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments