Webdunia - Bharat's app for daily news and videos

Install App

ಮಂಡ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ ಭರ್ಜರಿ ಪ್ರಚಾರ

Webdunia
ಶನಿವಾರ, 28 ಏಪ್ರಿಲ್ 2018 (14:15 IST)
ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಪರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ನಗರದಲ್ಲಿ ಅಬ್ಬರದ ರೋಡ್ ಷೋ ನಡೆಸಿದ್ರು.
ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಗೆ ಎಚ್ಡಿಕೆ ಬರುತ್ತಿದ್ದಂತೆ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಎಚ್ಡಿಕೆಯನ್ನ ಸ್ವಾಗತಿಸಿದ್ರು. ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ, ಹೂ ಎರಚಿ ಎಚ್ಡಿಕೆಗೆ ಭರ್ಜರಿ ಸ್ವಾಗತ ಕೋರಿದ್ರು. 
 
ಇನ್ನು ಕಲ್ಲಹಳ್ಳಿಯಲ್ಲಿ ರೋಡ್ ಷೋ ನಡೆಸಿದ ಎಚ್ಡಿಕೆಗೆ ಮಹಿಳೆಯರು ಮಕ್ಕಳು, ಮಹಡಿಯ ಮೇಲೆ ನಿಂತು ಪುಷ್ಪಾರ್ಚನೆ ಮಾಡ್ತಿದ್ರು. ಎಚ್ಡಿಕೆ  ಕಲ್ಲಹಳ್ಳಿ ಬಡಾವಣೆಯ ಮೂಲಕ ಶಂಕರಮಠ, ಪೇಟೆ ಬೀದಿ ಸಂಜಯ ವೃತ್ತ, ಆರ್.ಪಿ.ರಸ್ತೆ, ಕರ್ನಾಟಕ ಬಾರ್ ವೃತ್ತ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಪರ ರೋಡ್ ಷೋ ನಡೆಸಿದ್ರು. 
 
ಇದೇ ಸಂದರ್ಭದಲ್ಲಿ ಎಚ್ಡಿಕೆಗೆ ಅಭ್ಯರ್ಥಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ಮುಖಂಡ ಅಶೋಕ್ ಜಯರಾಂ, ಕಿರುತೆರೆ ನಟರು ಸಾಥ್ ನೀಡಿದ್ರು. ಇನ್ನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುಖಂಡರಾದ ಡಾ.ಕೃಷ್ಣ, ಕೀಲಾರ ರಾಧಾಕೃಷ್ಣ ಸಹ ರೋಡ್ ಷೋನಲ್ಲಿ ಭಾಗಿಯಾಗಿದ್ರು. 
 
ಇದೇ ಸಂದರ್ಭದಲ್ಲಿ ಮಾತನಾಡಿದ ಎಚ್ಡಿಕೆ, ಮಹಿಳೆಯರು, ವೃದ್ಧರ ಪರ ಜೆಡಿಎಸ್ ಸರ್ಕಾರವಿದ್ದು, ಅಭಿವೃದ್ಧಿಗಾಗಿ ಎಚ್ಡಿಕೆ ಬೆಂಬಲಿಸಿ ಎಂದು ಕರೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments