Webdunia - Bharat's app for daily news and videos

Install App

ಮಂಡ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ ಭರ್ಜರಿ ಪ್ರಚಾರ

Webdunia
ಶನಿವಾರ, 28 ಏಪ್ರಿಲ್ 2018 (14:15 IST)
ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಪರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ನಗರದಲ್ಲಿ ಅಬ್ಬರದ ರೋಡ್ ಷೋ ನಡೆಸಿದ್ರು.
ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಗೆ ಎಚ್ಡಿಕೆ ಬರುತ್ತಿದ್ದಂತೆ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಎಚ್ಡಿಕೆಯನ್ನ ಸ್ವಾಗತಿಸಿದ್ರು. ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ, ಹೂ ಎರಚಿ ಎಚ್ಡಿಕೆಗೆ ಭರ್ಜರಿ ಸ್ವಾಗತ ಕೋರಿದ್ರು. 
 
ಇನ್ನು ಕಲ್ಲಹಳ್ಳಿಯಲ್ಲಿ ರೋಡ್ ಷೋ ನಡೆಸಿದ ಎಚ್ಡಿಕೆಗೆ ಮಹಿಳೆಯರು ಮಕ್ಕಳು, ಮಹಡಿಯ ಮೇಲೆ ನಿಂತು ಪುಷ್ಪಾರ್ಚನೆ ಮಾಡ್ತಿದ್ರು. ಎಚ್ಡಿಕೆ  ಕಲ್ಲಹಳ್ಳಿ ಬಡಾವಣೆಯ ಮೂಲಕ ಶಂಕರಮಠ, ಪೇಟೆ ಬೀದಿ ಸಂಜಯ ವೃತ್ತ, ಆರ್.ಪಿ.ರಸ್ತೆ, ಕರ್ನಾಟಕ ಬಾರ್ ವೃತ್ತ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಪರ ರೋಡ್ ಷೋ ನಡೆಸಿದ್ರು. 
 
ಇದೇ ಸಂದರ್ಭದಲ್ಲಿ ಎಚ್ಡಿಕೆಗೆ ಅಭ್ಯರ್ಥಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ಮುಖಂಡ ಅಶೋಕ್ ಜಯರಾಂ, ಕಿರುತೆರೆ ನಟರು ಸಾಥ್ ನೀಡಿದ್ರು. ಇನ್ನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುಖಂಡರಾದ ಡಾ.ಕೃಷ್ಣ, ಕೀಲಾರ ರಾಧಾಕೃಷ್ಣ ಸಹ ರೋಡ್ ಷೋನಲ್ಲಿ ಭಾಗಿಯಾಗಿದ್ರು. 
 
ಇದೇ ಸಂದರ್ಭದಲ್ಲಿ ಮಾತನಾಡಿದ ಎಚ್ಡಿಕೆ, ಮಹಿಳೆಯರು, ವೃದ್ಧರ ಪರ ಜೆಡಿಎಸ್ ಸರ್ಕಾರವಿದ್ದು, ಅಭಿವೃದ್ಧಿಗಾಗಿ ಎಚ್ಡಿಕೆ ಬೆಂಬಲಿಸಿ ಎಂದು ಕರೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments