Webdunia - Bharat's app for daily news and videos

Install App

ಐದೇ ನಿಮಿಷದಲ್ಲಿ ಭಾರತಕ್ಕೆ ಹೊಸ ಪ್ರಧಾನಿ ಆಯ್ಕೆ ಮಾಡುವ ಫಾರ್ಮುಲಾ ಹೇಳಿದ ಲಾಲೂ ಪ್ರಸಾದ್ ಯಾದವ್!

Webdunia
ಶುಕ್ರವಾರ, 31 ಆಗಸ್ಟ್ 2018 (09:08 IST)
ನವದೆಹಲಿ: ಭ್ರಷ್ಟಾಚಾರ ಆರೋಪ ಹೊತ್ತು ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಗೆದ್ದರೆ ಪ್ರಧಾನಿ ಯಾರಾಗಬೇಕೆಂಬ ತಲೆನೋವಿಗೆ ಪರಿಹಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವುದು ಎಲ್ಲಾ ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ. ಇದೇ ಕಾರಣಕ್ಕೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅತೀ ಹೆಚ್ಚು ಸ್ಥಾನ ಪಡೆದ ಪಕ್ಷದ ನಾಯಕರು ಪ್ರಧಾನಿಯಾಗಲಿ ಎಂದಿದ್ದರು.

ಆದರೆ ಸದ್ಯ ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿರುವ ಲಾಲೂ ಯಾದವ್ ಇನ್ನೊಂದು ಸೂತ್ರ ಕಂಡುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿದ ಬಳಿಕ ಎಲ್ಲಾ ಸಮಾನ ಮನಸ್ಕ ಪಕ್ಷಗಳು ಸಭೆ ನಡೆಸಲಿ. ಸಭೆಯಲ್ಲಿ ಐದೇ ನಿಮಿಷದಲ್ಲಿ ಪ್ರಧಾನಿ ಯಾರಾಗಬೇಕೆಂದು ನಿರ್ಧರಿಸಲಿ. ಅವರನ್ನೇ ಪ್ರಧಾನಿ ಮಾಡಲಿ ಎಂದು ಲಾಲೂ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments