Webdunia - Bharat's app for daily news and videos

Install App

ಮಂಡ್ಯ ಕ್ಷೇತ್ರಕ್ಕೆ ಬರುವಂತೆ ಅಂಬರೀಶ್ ರಲ್ಲಿ ಮುಖಂಡರ ಮನವಿ

Webdunia
ಗುರುವಾರ, 19 ಏಪ್ರಿಲ್ 2018 (05:59 IST)
ಬೆಂಗಳೂರು : ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೂಡ ಪ್ರಕಟವಾಗಿದ್ದು, ಮಂಡ್ಯ ಕ್ಷೇತ್ರದಿಂದ ನಟ ಅಂಬರೀಶ್ ಅವರಿಗೆ ಟಿಕೆಟ್ ಕೂಡ ಫೈನಲ್ ಆಗಿದೆ. ಆದರೆ  ಅಂಬರೀಶ್ ಅವರು ಮಾತ್ರ ಮಂಡ್ಯಕ್ಕೆ ಬರದೆ ಬೆಂಗಳೂರಿನಲ್ಲಿಯೇ ಇದ್ದಾರೆ.


ಆದ ಕಾರಣ ಮಂಡ್ಯದ ಮುಖಂಡರು ಅಂಬರೀಶ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದ್ದಾರೆ. ಈಗ ಚುನಾವಣೆ ಘೋಷಣೆ ಆಗಿದೆ‌ ಕಾಂಗ್ರೆಸ್ ನಿಂದ ‌ನಿಮಗೆ ಟಿಕೆಟ್ ಫೈನಲ್ ಆಗಿದೆ, ಪಕ್ಷದ ಅಧ್ಯಕ್ಷರು ಬಿ ಫಾರಂ ಕೂಡ ವಿತರಣೆ ಮಾಡುತ್ತಿದ್ದಾರೆ. ನಾವು ಕೂಡ ಕ್ಷೇತ್ರದಲ್ಲಿ ‌ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ‌ಮಾಡಿಕೊಂಡಿದ್ದೇವೆ. ನೀವು ಕ್ಷೇತ್ರಕ್ಕೆ ಬನ್ನಿ, ಕಾರ್ಯಕರ್ತರ ಮುಖಂಡರ ಜೊತೆ ಸಭೆ ಮಾಡಿ. ಈಗಾಗಲೇ ನಮ್ಮ ಕಾರ್ಯಕರ್ತರು ನಿಮಗಾಗಿ ಕಾಯುತ್ತಿದ್ದಾರೆ ಎಂದು ಅಂಬರೀಶ್ ಅವರನ್ನು ಒತ್ತಾಯಿಸಿದ್ದಾರೆ.


ಈ ಬಗ್ಗೆ ಒಂದೂವರೆ ಗಂಟೆಗೂ ಹೆಚ್ಚು ಸಮಯ ಕಾಲ ಮುಖಂಡರ ಜೊತೆಗೆ ಚರ್ಚೆ ಮಾಡಿ ನಂತರ ಆಯ್ತು ಮೊದಲು ಬಿ ಫಾರಂ ಬರಲಿ ಆಮೇಲೆ ನೋಡೋಣ ಎಂದು ಅಂಬರೀಶ್ ಅವರು ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments