Webdunia - Bharat's app for daily news and videos

Install App

ರಾಜಕೀಯ ಲಾಭಕ್ಕೆ ಮಾಡುವ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ : ಬೊಮ್ಮಾಯಿ

Webdunia
ಮಂಗಳವಾರ, 5 ಸೆಪ್ಟಂಬರ್ 2023 (09:04 IST)
ಬೆಂಗಳೂರು : ಉಚಿತ ಯೋಜನೆಗಳು ರಾಜಕೀಯ ಲಾಭಕ್ಕೆ ಮಾಡೋ ಯೋಜನೆಗಳು. ಈ ಯೋಜನೆಯ ಆಯಸ್ಸು ಸ್ವಲ್ಪ ದಿನ ಮಾತ್ರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಉಚಿತ ಯೋಜನೆಗಳ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಅವರ ಹೇಳಿಕೆ ಸಮರ್ಥನೆ ಮಾಡಿಕೊಂಡ ಅವರು, ಪ್ರತಿಯೊಬ್ಬ ನಾಗರಿಕರ ಆದಾಯ ಹೆಚ್ಚಾಗಬೇಕು. ಉದ್ಯೋಗ ಸಿಗಬೇಕು. ಆರ್ಥಿಕತೆ ಹೆಚ್ಚಾಗಬೇಕು, ಕೊಳ್ಳುವ ಪವರ್ ಹೆಚ್ಚಾಗಬೇಕು.

ಆಗ ದೇಶ ಅಭಿವೃದ್ಧಿ ಆಗುತ್ತದೆ ಎಂದು ಮೋದಿ ಹೇಳಿದ್ದಾರೆ. ಉಚಿತ ಯೋಜನೆಗಳು ಅಲ್ಪ ಕಾಲದ ಯೋಜನೆಗಳು. ಇವು ಸ್ವಲ್ಪ ದಿನ ಆದ ಮೇಲೆ ಲಾಭ ಕೊಡುವುದಿಲ್ಲ. ಇದನ್ನು ರಾಜಕೀಯ ಲಾಭಕ್ಕೆ ಮಾಡುತ್ತಾರೆ. ಇದನ್ನೇ ಮೋದಿ ಅವರು ಹೇಳಿದ್ದಾರೆ ಎಂದರು. 

ಇನ್ನು ಅನ್ನಭಾಗ್ಯ ಯೋಜನೆಯಡಿ 35 ಲಕ್ಷ ಫಲಾನುಭವಿಗಳಿಗೆ ಹಣ ಹಾಕದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ಕುಂಟು ನೆಪ ಹೇಳಿ ಅನೇಕರನ್ನು ದೂರ ಇಡುತ್ತಾರೆ ಎಂದು ನಾನು ಅವತ್ತೇ ಹೇಳಿದ್ದೆ. ಈಗ ಅದನ್ನೆ ಮಾಡಿದ್ದಾರೆ.

ಕೇಂದ್ರ ಕೊಡುತ್ತಿರುವ 5 ಕೆಜಿ ಅಕ್ಕಿ ಕೂಡಾ ಕಡಿಮೆ ಮಾಡಿದ್ದಾರೆ. 3 ಕೆಜಿ ಅಕ್ಕಿ ಕೊಟ್ಟು ಉಳಿದದ್ದು ಜೋಳ, ರಾಗಿ ಕೊಡುವ ಕೆಲಸ ಮಾಡುತ್ತಿದ್ದಾರೆ. 5 ಕೆಜಿಗೆ ಕೊಡುತ್ತಿರುವ ಹಣ ಸರಿಯಾಗಿ ಕೊಡುತ್ತಿಲ್ಲ. 35 ಲಕ್ಷ ಜನರನ್ನು ಹೊರಗೆ ಇಟ್ಟಿದ್ದಾರೆ. ತಾಂತ್ರಿಕ ಕಾರಣ ಎನ್ನುತ್ತಾರೆ ಎಂದು ಕಿಡಿಕಾರಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments