Webdunia - Bharat's app for daily news and videos

Install App

ಕೇರಳ ಬಳಿಕ ಬಂಗಾಳದಲ್ಲಿ ಲಾಕ್ಡೌನ್; ಕರ್ನಾಟಕದಲ್ಲಿ ಹೆಚ್ಚಿದ ಆತಂಕ!

Webdunia
ಶುಕ್ರವಾರ, 30 ಜುಲೈ 2021 (09:49 IST)
ಬೆಂಗಳೂರು(ಜು.30):  ಕೊರೋನಾ 2ನೇ ಅಲೆ ಕಡಿಮೆಯಾಗಿದೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳು ಅನ್ಲಾಕ್ ಆಗಿವೆ. ಇದರ ಪರಿಣಾಣ ಇದೀಗ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ.  ಕೇರಳದಲ್ಲಿ ಕೊರೋನಾ ಮೀತಿ ಮೀರುತ್ತಿದೆ. ಹೀಗಾಗಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.

•ಅನ್ಲಾಕ್, ನಿರ್ಲಕ್ಷ್ಯದಿಂದ ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ
•ಕೇರಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಲಾಕ್ಡೌನ್ ವಿಸ್ತರಣೆ
•ಕರ್ನಾಟಕ ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ
•ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಿದ ಆತಂಕ
 ಇದೀಗ ಪಶ್ಚಿಮ ಬಂಗಾಳದಲ್ಲಿ ಲಾಕ್ಡನ್ ವಿಸ್ತರಿಸಲಾಗಿದೆ. ಈ ಬೆಳವಣಿಗೆ ಕರ್ನಾಟಕದಲ್ಲಿನ ಆತಂಕ ಹೆಚ್ಚಿಸಿದೆ. ಪಶ್ಚಿಮ ಬಂಗಾಳದಲ್ಲಿ ಆಗಸ್ಟ್ 15ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಆದರೆ ಕೆಲ ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆ ವರೆಗೆ ಇರಲಿದೆ. ಇನ್ನು ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಬಂಗಾಳ
ಕೇರಳದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ. ಹೀಗಾಗಿ ಜುಲೈ 31 ಹಾಗೂ ಆಗಸ್ಟ್ 1 ರಂದು ಕೇರಳ ಸಂಪೂರ್ಣ ಲಾಕ್ಡೌನ್ ಆಗಲಿದೆ. ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕ ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದು ಆತಂಕ ಹೆಚ್ಚಿಸಿದೆ.
ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕರ್ನಾಟಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಇನ್ನು ಕರ್ನಾಟಕ ಸಂಪೂರ್ಣ ಅನ್ಲಾಕ್ ಆಗಿದೆ. ಹೀಗಾಗಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಸುತ್ತ ಮುತ್ತಲಿನ ಎಲ್ಲಾ ರಾಜ್ಯಗಳಲ್ಲಿ ಕೊರೋನಾ ಏರಿಕೆಯಿಂದ ಇದೀಗ ಕರ್ನಾಟಕದಲ್ಲೂ ಕಠಿಣ ನಿಯಮ ಜಾರಿಯಾದರೂ ಅಚ್ಚರಿಯಿಲ್ಲ.
ಕೇರಳದಲ್ಲಿ ಪ್ರತಿ ದಿನ 22,856 ಹೊಸ ಕೊರೋನಾ ಪ್ರಕರಣ ದಾಖಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 6,857 ಕೊರೋನಾ ಪ್ರಕರಣ, ಆಂಧ್ರ ಪ್ರದೇಶದಲ್ಲಿ 2,000 ಹಾಗೂ ಕರ್ನಾಟಕದಲ್ಲಿ ಹೊಸ ಕೊರೋನಾ ಪ್ರಕರಣ ಸಂಖ್ಯೆ ಪ್ರತಿ ದಿನ 1531 ದಾಖಲಾಗುತ್ತಿದೆ. ಗಡಿ ನಿರ್ಬಂಧವೂ ತೆರವುಗೊಳಿಸಾಗಿರುವ ಕಾರಣ ಕರ್ನಾಟಕದ ಆತಂಕ ಹೆಚ್ಚಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments