ಡಿಎಂಕೆ ಧುರೀಣ ಎಂ ಕರುಣಾನಿಧಿ ತೀವ್ರ ಅಸ್ವಸ್ಥ

Webdunia
ಶುಕ್ರವಾರ, 27 ಜುಲೈ 2018 (10:22 IST)
ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ನೋಡಲು ಗೋಪಾಲಪುರಂ ಬಳಿಯ ನಿವಾಸಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ.

ಇತ್ತೀಚೆಗಿನ ದಿನಗಳಲ್ಲಿ ಸಾರ್ವಜನಿಕ ಜೀವನದಿಂದ ದೂರವಾಗಿರುವ 94 ವರ್ಷದ ಕರುಣಾನಿಧಿ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ನಿಗಾ ವಹಿಸಿದ್ದಾರೆ. ಇನ್ನು, ಅವರ ಆರೋಗ್ಯದ ಬಗ್ಗೆ ಹರಿದಾಡುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪುತ್ರ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.

ಇನ್ನು, ತಮಿಳುನಾಡು ಡಿಸಿಎಂ ಒ ಪನೀರ್ ಸೆಲ್ವಂ ಸೇರಿದಂತೆ ಸಚಿವರ ದಂಡೇ ಹರಿದುಬಂದಿದೆ.  ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಯಾಗಿರುವ ಕಮಲ್ ಹಾಸನ್ ಕೂಡಾ ಕರುಣಾನಿಧಿ ನಿವಾಸಕ್ಕೆ ಆಗಮಿಸಿದ್ದಾರೆ.

ಜ್ವರ, ಮೂತ್ರದ ಸೋಂಕು ಸಮಸ್ಯೆಯಿಂದ ಕರುಣಾನಿಧಿ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸದೇ ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬ ವರ್ಗ ತೀರ್ಮಾನಿಸಿದೆ. ಹೀಗಾಗಿ ಕಾವೇರಿ ಆಸ್ಪತ್ರೆಯ ವೈದ್ಯರು ಕರುಣಾನಿಧಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments