Webdunia - Bharat's app for daily news and videos

Install App

ಡಿಎಂಕೆ ಧುರೀಣ ಎಂ ಕರುಣಾನಿಧಿ ತೀವ್ರ ಅಸ್ವಸ್ಥ

Webdunia
ಶುಕ್ರವಾರ, 27 ಜುಲೈ 2018 (10:22 IST)
ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ನೋಡಲು ಗೋಪಾಲಪುರಂ ಬಳಿಯ ನಿವಾಸಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ.

ಇತ್ತೀಚೆಗಿನ ದಿನಗಳಲ್ಲಿ ಸಾರ್ವಜನಿಕ ಜೀವನದಿಂದ ದೂರವಾಗಿರುವ 94 ವರ್ಷದ ಕರುಣಾನಿಧಿ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ನಿಗಾ ವಹಿಸಿದ್ದಾರೆ. ಇನ್ನು, ಅವರ ಆರೋಗ್ಯದ ಬಗ್ಗೆ ಹರಿದಾಡುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪುತ್ರ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.

ಇನ್ನು, ತಮಿಳುನಾಡು ಡಿಸಿಎಂ ಒ ಪನೀರ್ ಸೆಲ್ವಂ ಸೇರಿದಂತೆ ಸಚಿವರ ದಂಡೇ ಹರಿದುಬಂದಿದೆ.  ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಯಾಗಿರುವ ಕಮಲ್ ಹಾಸನ್ ಕೂಡಾ ಕರುಣಾನಿಧಿ ನಿವಾಸಕ್ಕೆ ಆಗಮಿಸಿದ್ದಾರೆ.

ಜ್ವರ, ಮೂತ್ರದ ಸೋಂಕು ಸಮಸ್ಯೆಯಿಂದ ಕರುಣಾನಿಧಿ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸದೇ ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬ ವರ್ಗ ತೀರ್ಮಾನಿಸಿದೆ. ಹೀಗಾಗಿ ಕಾವೇರಿ ಆಸ್ಪತ್ರೆಯ ವೈದ್ಯರು ಕರುಣಾನಿಧಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments