Webdunia - Bharat's app for daily news and videos

Install App

ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

Webdunia
ಸೋಮವಾರ, 3 ಅಕ್ಟೋಬರ್ 2022 (09:19 IST)
ಅಮರಾವತಿ : `ಮಂಗಳಯಾನ’ದ ಕಕ್ಷೆಗಾಮಿ ಮಂಗಳ ಗ್ರಹದ ಕಕ್ಷೆಯಲ್ಲಿ ಪರಿಭ್ರಮಣೆ ಆರಂಭಿಸಿದ 8 ವರ್ಷಗಳ ಬಳಿಕ ಇಂಧನ ಖಾಲಿಯಾಗಿದೆ.

ಅದರ ಬ್ಯಾಟರಿ ಸುರಕ್ಷಿತ ಮಿತಿಯನ್ನು ಮೀರಿದ್ದು, ದೇಶದ ಚೊಚ್ಚಲ ಉಪಗ್ರಹ ಮಿಷನ್ ಮಂಗಳಯಾನ ತನ್ನ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿದೆ.

ಸುಮಾರು 450 ಕೋಟಿ ರೂ. ವೆಚ್ಚದ ಮಾರ್ಸ್ ಆರ್ಬಿಟರ್ ಮಿಷನ್  ಅನ್ನು 2013ರ ನವೆಂಬರ್ 5ರಂದು ಶ್ರೀಹರಿಕೋಟದಿಂದ ಪಿಎಸ್ಎಲ್ವಿ ರಾಕೆಟ್ ಮೂಲಕ  ಉಡಾವಣೆ ಮಾಡಲಾಗಿತ್ತು.

2014 ಸೆಪ್ಟೆಂಬರ್ 24ರಂದು ಮಿಷನ್ ಮಾರ್ಸ್ ಆರ್ಬಿಟರ್ ಮಿಷನ್ ಮಂಗಳ ಕಕ್ಷೆಗೆ ಸೇರಿತು. ಸದ್ಯ ಉಪಗ್ರಹದಲ್ಲಿ ಇಂಧನ ಹಾಗೂ ಬ್ಯಾಟರಿ ಖಾಲಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಆದರೆ ಇಸ್ರೋದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಭಾರತದ `ಮಂಗಳಯಾನ’ ಉಪಗ್ರಹವು 8 ವರ್ಷ ಪೂರ್ಣಗೊಳಿಸಿದೆ. ಆರು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಲು ಇದನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ತನ್ನ ಅವಧಿ ಮೀರಿ ಕಾರ್ಯನಿರ್ವಹಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments