Webdunia - Bharat's app for daily news and videos

Install App

ಕಾಂಗ್ರೆಸ್ ನ ಹಲವು ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಯಡಿಯೂರಪ್ಪ ಹೊಸ ಬಾಂಬ್

Webdunia
ಮಂಗಳವಾರ, 21 ಸೆಪ್ಟಂಬರ್ 2021 (11:15 IST)
ಬೆಂಗಳೂರು : ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಶಾಸಕರನ್ನು ಡಿ.ಕೆ ಶಿವಕುಮಾರ್ ಸೆಳೆಯುವುದರಲ್ಲಿ ಯಾವುದೇ ಅರ್ಥ ಇಲ್ಲ. ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ. ಅದು ಅವರ ವ್ಯರ್ಥ ಪ್ರಯತ್ನ. ಕಾಂಗ್ರೆಸ್ ಶಾಸಕರೇ ನಮ್ಮ ಜೊತೆ ಬರುತ್ತಾರೆ ಎಂದರು.
ಕಾಂಗ್ರೆಸ್ ನ ಯಾವ ಯಾವ ಶಾಸಕರು ಬರುತ್ತಾರೆ ಎಂಬ ಬಗ್ಗೆ ನಿಮಗೆ ಸ್ವಲ್ಪ ದಿನದಲ್ಲೇ ಗೊತ್ತಾಗುತ್ತದೆ. ಕಾಂಗ್ರೆನವರು ಇವತ್ತು ಸೈಕಲ್ ನಲ್ಲಿ ಅಧಿಕಾರಕ್ಕಾಗಿ ವಿಧಾನಸೌಧಕ್ಕೆ ಬರುತ್ತಾರೆ. ಅವರಿಗಿಂತ ಮೊದಲು ಬಿಜೆಪಿಯವರು ಕಾರು, ಸ್ಕೂಟರ್ ಬೈಕ್ ನಲ್ಲಿ ಬಂದು ವಿಧಾನಸೌಧ ಸೇರಿಕೊಳ್ಳುತ್ತೇವೆ ಎಂದರು. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 140 ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತ ಪಡಿಸಿದರು.
ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸೇರಲು ಮುಂದಾಗಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರ ಅನುಮತಿಗಾಗಿ ಕಾಯುತ್ತಿದ್ದೇವೆ, ಈಗಾಗಲೇ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದ್ದೇವೆ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದ್ದಾರೆ.
ಇನ್ನೂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, "ನಾನು ನಮ್ಮ ಕಾರ್ಯತಂತ್ರವನ್ನು ಏಕೆ ಬಹಿರಂಗಪಡಿಸಬೇಕು? ನಮ್ಮ ಕಾರ್ಯತಂತ್ರವನ್ನು ನಾನು ಬಹಿರಂಗಪಡಿಸಲು ಬಯಸುವುದಿಲ್ಲ. ಯಾರು ಯಾರೊಂದಿಗೆ ಹೋಗಲು ಬಯಸುತ್ತಾರೆ,. ಯಾರು ಯಾರೊಂದಿಗೆ ಬರಲು ಬಯಸುತ್ತಾರೆ ಎಂಬುದನ್ನು ಕಾದು ನೋಡೋಣ, ಯಡಿಯೂರಪ್ಪ ಏನನ್ನೋ ಹೇಳಿದ್ದಾರೆ, ಅಶೋಕ ಏನೋ ಹೇಳಿದ್ದಾರೆ, ಯಾರ ಮಾತು ನಿಜವಾಗುತ್ತದೆ ಎಂಬುದಕ್ಕೆ ಸ್ವಲ್ಪ ಸಮಯ ಬೇಕಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

Pehalgam viral video: ಬಿಸ್ಕತ್, ಚಾಕಲೇಟ್ ಬೇಡ ಅಪ್ಪ ಅಮ್ಮ ಬೇಕು ಎಂದು ಕಣ್ಣೀರು ಹಾಕುವ ಮಗುವಿನ ನೋಡಿದ್ರೆ ಅಳುವೇ ಬರುತ್ತೆ

ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments