ಉಷ್ಣಾಂಶ ಭಾರೀ ಪ್ರಮಾಣದಲ್ಲಿ ಏರಿಕೆ : ಜನಜೀವನದ ಅಸ್ತವ್ಯಸ್ತ..!

Webdunia
ಶನಿವಾರ, 30 ಏಪ್ರಿಲ್ 2022 (10:35 IST)
ನವದೆಹಲಿ :  ಭಾರತೀಯ ಹವಾಮಾನ ಇಲಾಖೆ 7 ರಾಜ್ಯಗಳಿಗೆ ಉಷ್ಣ ಮಾರುತದ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಉತ್ತರದ ಹಲವು ರಾಜ್ಯಗಳಲ್ಲಿ ಶುಕ್ರವಾರ ಉಷ್ಣಾಂಶ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು,
 
ಸಾಮಾನ್ಯ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಪಂಜಾಬ್, ಹರ್ಯಾಣ, ಗುಜರಾತ್ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರಾಸರಿ ಉಷ್ಣಾಂಶ 45 ಡಿ.ಸೆ ದಾಟಿದೆ.

ಉತ್ತರಪ್ರದೇಶದ ಬಂಡಾದಲ್ಲಿ ಗರಿಷ್ಠ 47.4 ಡಿ.ಸೆ, ಪ್ರಯಾಗ್ರಾಜ್ನಲ್ಲಿ 47 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಪ್ರಯಾಗ್ರಾಜ್ನ ಉಷ್ಣಾಂಶದ ಪ್ರಮಾಣವು ಏಪ್ರಿಲ್ ತಿಂಗಳಲ್ಲಿ ಕಳೆದ 20 ವರ್ಷಗಳಲ್ಲಿ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಉಳಿದಂತೆ ಅಲಹಾಬಾದ್ನಲ್ಲಿ 46.8 ಡಿ.ಸೆ., ದಾಖಲಾಗಿದೆ.

ಇನ್ನು ರಾಜಸ್ಥಾನದ ಧೋಲ್ಪುರದಲ್ಲಿ 46.5, ಶ್ರೀಗಂಗಾನಗರದಲ್ಲಿ 46.4,ಸಂಗಾರಿಯಾದಲ್ಲಿ 46 ಡಿ.ಸೆ ದಾಖಲಾಗಿದೆ. ಮೇ 1ರಂದು ಜೋಧಪುರ, ಬಿಕಾನೇರ್ ಜಿಲ್ಲೆಗಳಲ್ಲಿ ಉಷ್ಣಾಂಶ ಕ್ರಮವಾಗಿ 45, 47 ಡಿ.ಸೆ. ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಚಂದ್ರಾಪುರ ಜಿಲ್ಲೆಯಲ್ಲಿ 46.4 ಡಿ.ಸೆ. ಉಷ್ಣಾಂಶ ಬಿಸಿಲಿನ ಹೊಡೆತ ತಾಳಲಾಗದೇ 68 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇನ್ನು ರಾಜಧಾನಿ ದೆಹಲಿಯಲ್ಲಿ ಶುಕ್ರವಾರ 46 ಡಿ.ಸೆ. ತಾಪಮಾನ ದಾಖಲಾಗಿದೆ. ಇದು ಏಪ್ರಿಲ್ ತಿಂಗಳಿನಲ್ಲಿ 12 ವರ್ಷದ ಗರಿಷ್ಠ.

ಮುಂದಿನ 5 ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಿಸಿಯ ವಾತಾವರಣ ಹೆಚ್ಚಾಗಲಿದೆ. ವಾಯವ್ಯ ಭಾರತದಲ್ಲಿ ಮುಂದಿನ 3 ದಿನಗಳಲ್ಲಿ ಉಷ್ಣಾಂಶ 2 ಡಿಗ್ರಿ ಏರಿಕೆಯಾಗಲಿದೆ.

ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಶಾಲೆಗಳಿಗೆ ಏ.30ರವರೆಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಶಾಲಾ- ಕಾಲೇಜುಗಳಿಗೆ ಮೇ 2ರವರೆಗೆ ರಜೆ ಪ್ರಕಟಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments