Select Your Language

Notifications

webdunia
webdunia
webdunia
webdunia

ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ

ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ
ಬೆಂಗಳೂರು , ಗುರುವಾರ, 10 ಫೆಬ್ರವರಿ 2022 (11:25 IST)
ಬೆಂಗಳೂರು : ಹಿಜಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಕೋರ್ಟ್ ತೀರ್ಪಿಗಾಗಿ ಕಾಯೋಣ.

ಶಾಂತಿ ಕದಡುವ ಹೇಳಿಕೆ ಬೇಡ. ನಮ್ಮಷ್ಟಕ್ಕೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ. ಮಾತನಾಡುವುದನ್ನು ನಿಲ್ಲಿಸಿ ಎಂದು ತಿಳಿಸಿದರು. ಶಾಲೆಗಳಲ್ಲಿ ಸಮವಸ್ತ್ರ ಪ್ರಕರಣದ ಅರ್ಜಿಯೂ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಆಗಿದೆ.

ಸಂಜೆ ಶಿಕ್ಷಣ ಸಚಿವ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಮೊದಲಿನ ತರಹ ಸೌಹಾರ್ದ ಶಾಂತಿ ತರುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಕದ ಮನೆಯವಳ ಜೊತೆ ಪತಿಯ ಕಾಮಕೇಳಿಗೆ ಸಾಥ್ ಕೊಟ್ಟ ಪತ್ನಿ