ಬಂಡಾಯದ ಎಚ್ಚರಿಕೆ ನೀಡಿದ ಮಾಜಿ ಸಚಿವ ಎಂಬಿ ಪಾಟೀಲ್

Webdunia
ಶನಿವಾರ, 9 ಜೂನ್ 2018 (08:42 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಿಂದ ಶುರುವಾದ ಅಸಮಾಧಾನ ತಾರಕಕ್ಕೇರಿದ್ದು, ಡಿಸಿಎಂ ಖಾತೆಗೆ ಪಟ್ಟು ಹಿಡಿದಿರುವ ಮಾಜಿ ಸಚಿವ ಎಂಬಿ ಪಾಟೀಲ್ ಬಂಡಾಯದ ಎಚ್ಚರಿಕೆ ನೀಡಿದ್ದಾರೆ.

ನನ್ನ ಜತೆ 20 ಶಾಸಕರಿದ್ದಾರೆ ಎಂದು ಹೈಕಮಾಂಡ್ ಗೆ ಪಾಟೀಲ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ನಿನ್ನೆಯಷ್ಟೇ ಸಿಎಂ ಕುಮಾರಸ್ವಾಮಿ ಪಾಟೀಲ್ ಜತೆಗೆ ಮಾತುಕತೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಹೈಕಮಾಂಡ್ ಪಾಟೀಲ್ ಗೆ ಬುಲಾವ್ ನೀಡಿದೆ.

ಅತೃಪ್ತರಿಗೆ ಎಂಬಿ ಪಾಟೀಲ್ ನೇತೃತ್ವ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಸೇರಿದಂತೆ ಸುಮಾರು 20 ಅಸಮಾಧಾನಿತ ಶಾಸಕರು ಪಾಟೀಲ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಶಾಸಕರೊಂದಿಗೆ ಎಂಬಿ ಪಾಟೀಲ್ ಈಗಾಗಲೇ ಸಭೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. ಈ ಮೂಲಕ ನಾನು ಏಕಾಂಗಿಯಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಇದು ಸಮ್ಮಿಶ್ರ ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್‌ ಸಿಗ್ನಲ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments