Publish Date: Mon, 28 Feb 2022 (20:12 IST)
Updated Date: Mon, 28 Feb 2022 (21:15 IST)
ನವದೆಹಲಿ : ಉಕ್ರೇನ್ಗೆ ಭಾರತದಿಂದ ವೈದ್ಯಕೀಯ ನೆರವನ್ನು ಕಳುಹಿಸಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ಸೋಮವಾರ ತಿಳಿಸಿದ್ದಾರೆ.
ರಷ್ಯಾ ದಾಳಿಯಿಂದಾಗಿ ಉಕ್ರೇನ್ ತತ್ತರಿಸಿ ಹೋಗಿದೆ. ಸೈನಿಕರು ಮಾತ್ರವಲ್ಲದೇ ದೇಶವನ್ನು ರಕ್ಷಿಸಲು ಬಯಸುವ ನಾಗರಿಕರಿಗೂ ಉಕ್ರೇನ್ ಶಸ್ತ್ರಾಸ್ತ್ರ ನೀಡುತ್ತಿದೆ. ಇದೀಗ ಯುದ್ಧದಿಂದ ನಲುಗಿರುವ ದೇಶಕ್ಕೆ ಸಹಾಯ ಮಾಡಲು ಭಾರತ ವೈದ್ಯಕೀಯ ಹಾಗೂ ಮಾನವೀಯ ನೆರವನ್ನು ನೀಡಲು ಮುಂದಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಾಗ್ಚಿ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಈಗಾಗಲೇ 6 ವಿಮಾನಗಳನ್ನು ಕಳುಹಿಸಿ 1,400 ಭಾರತೀಯರನ್ನು ಕರೆತರಲಾಗಿದೆ. ಭಾರತೀಯ ರಾಯಭಾರಿಯ ಆದೇಶ ಬರುತ್ತಿದ್ದಂತೆ ಸುಮಾರು 8,000 ಭಾರತೀಯರು ಉಕ್ರೇನ್ ತೊರೆದಿದ್ದಾರೆ ಎಂದು ತಿಳಿಸಿದರು.