Select Your Language

Notifications

webdunia
webdunia
webdunia
webdunia

ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ

ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ
ಚೆನ್ನೈ , ಶುಕ್ರವಾರ, 10 ಸೆಪ್ಟಂಬರ್ 2021 (12:28 IST)
ಚೆನ್ನೈ : ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಆತಂಕ ಎದುರಾಗಿದೆ. ಈ ನಡುವೆ ನಿಫಾ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಬ್ಬ, ಸಭೆ, ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಿದೆ.

ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿಫಾ ಆತಂಕ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಹಬ್ಬಗಳ ಆಚರಣೆ, ರಾಜಕೀಯ ಸಮಾವೇಶ, ಸಭೆ, ಸಮಾರಂಭ, ಧಾರ್ಮಿಕ ಸಭೆಗಳ ಮೇಲೆ ಸಿಎಂ ಎಂ.ಕೆ.ಸ್ಟಾಲಿನ್ ಸರ್ಕಾರ ಸಂಪೂರ್ಣ ನಿರ್ಬಂಧ ವಿಧಿಸಿದೆ.
ಅಕ್ಟೋಬರ್ 31ರವರೆಗೆ ತಮಿಳುನಾಡಿನಲ್ಲಿ ಯಾವುದೇ ಸಮಾರಂಭ, ಸಮಾವೇಶಗಳನ್ನು ಮಾಡುವಂತಿಲ್ಲ. ಸರ್ಕಾರದ ನಿರ್ಧಾರವನ್ನು ಜನರು ಗೌರವಿಸಿ ಹಬ್ಬಗಳ ಆಚರಣೆಯನ್ನು ತಮ್ಮ ತಮ್ಮ ಮನೆಗಳಲ್ಲಿ ಮಾತ್ರ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ʼನಿಯಮ ಸಡಿಲಿಕೆʼ ವಿಚಾರ : ಬೊಮ್ಮಾಯಿ ಹೇಳಿದ್ದೇನು?