Webdunia - Bharat's app for daily news and videos

Install App

ಮೆಟ್ರೋ ಎಂಜಿನಿಯರ್ ಸಸ್ಪೆಂಡ್, ಕಂಟ್ರಾಕ್ಟರ್ ಮೇಲೆ ಕ್ರಿಮಿನಲ್ ಕೇಸ್ : ಸಿಎಂ

Webdunia
ಬುಧವಾರ, 11 ಜನವರಿ 2023 (08:44 IST)
ಬೆಂಗಳೂರು : ನಗರದಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು, ತಾಯಿ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿಗರನ್ನು ತಲ್ಲಣಗೊಳಿಸಿದೆ. ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದಲ್ಲದೇ ತುರ್ತು ಸಭೆ ನಡೆಸಿ ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿಯಲ್ಲಿ ಬೊಮ್ಮಾಯಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯೊಂದಿಗೆ ಸಭೆ ನಡೆಸಿದ್ದಾರೆ. ಮೆಟ್ರೋ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಕಾಮಗಾರಿಯ ಕಾಂಟ್ರಾಕ್ಟರ್ ಹಾಗೂ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಸೂಚನೆ ನೀಡಿದ್ದಾರೆ.

ಸಭೆ ಬಳಿಕ ಮಾತನಾಡಿದ ಬೊಮ್ಮಾಯಿ, ಮೆಟ್ರೋ ಪಿಲ್ಲರ್ ಕುಸಿತಕ್ಕೆ ಸಂಬಂಧಪಟ್ಟಂತೆ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ಕಾಂಟ್ರಾಕ್ಟರ್ ಹಾಗೂ ಕಂಪನಿಯವರ ಮೇಲೆ ಕೇಸ್ ದಾಖಲಿಸಲು ಸೂಚಿಸಿದ್ದೇನೆ. ಜೊತೆಗೆ ಕಾಮಗಾರಿ ಎಂಜಿನಿಯರ್ನನ್ನು ಅಮಾನತು ಮಾಡಲು ಆದೇಶಿಸಿದ್ದೇನೆ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments