ಇಂದು ಮೆಟ್ರೋ ಸೇವೆ ಸ್ಥಗಿತ!

Webdunia
ಭಾನುವಾರ, 26 ಜೂನ್ 2022 (06:10 IST)
ಬೆಂಗಳೂರು : ಇಂದು ರಾತ್ರಿ 9:30 ರಿಂದ ಭಾನುವಾರ ಬೆಳಗ್ಗೆ 7 ಗಂಟೆ ವರೆಗೂ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
 
ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ಇಂದು ರಾತ್ರಿ 9:30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. 

ನೇರಳೆ ಮಾರ್ಗದಲ್ಲಿ ಕೊನೆಯ ಮೆಟ್ರೋ ರೈಲು ಸೇವೆಯು ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8:40 ಗಂಟೆಗೆ ಹೊರಡಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 9:30 ಗಂಟೆಗೆ ಲಭ್ಯವಿರುತ್ತದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವೆ ರಾತ್ರಿ 9:10ರ ವರೆಗೆ ಲಭ್ಯವಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುತ್ತಿದ್ದ ಹಾಗೇ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಜೋಸೆಫ್ ವಿಜಯ್

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments