ಮಿಶ್ರ ಲಸಿಕೆ: ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ ಬಯಲು!

Webdunia
ಸೋಮವಾರ, 9 ಆಗಸ್ಟ್ 2021 (08:38 IST)
ನವದೆಹಲಿ(ಆ.09): ಒಂದು ಡೋಸ್ ಕೋವಿಶೀಲ್ಡ್ ಹಾಗೂ ಇನ್ನೊಂದು ಡೋಸ್ ಕೋವ್ಯಾಕ್ಸಿನ್ ಲಸಿಕೆ ನೀಡುವುದರಿಂದ ಕೊರೋನಾದ ವಿರುದ್ಧ ದೇಹದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಸೃಷ್ಟಿಯಾಗುತ್ತದೆ ಎಂದು ಭಾರತದಲ್ಲಿ ನಡೆದ ಮೊದಲ ಅಧಿಕೃತ ಅಧ್ಯಯನದಲ್ಲಿ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ಅಧ್ಯಯನ ನಡೆಸಿದೆ.

ಉತ್ತರ ಪ್ರದೇಶದ ಒಟ್ಟು 98 ಜನರ ಮೇಲೆ ಈ ಪ್ರಯೋಗ ನಡೆಸಲಾಗಿದೆ. ಇವರಲ್ಲಿ ಅಚಾತುರ್ಯದಿಂದ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ಪಡೆದ 18 ಜನರು ಸೇರಿದ್ದಾರೆ. ಇನ್ನುಳಿದ 80 ಜನರಲ್ಲಿ 40 ಜನರಿಗೆ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ ಎರಡನೇ ಡೋಸ್ ಕೋವ್ಯಾಕ್ಸಿನ್ ನೀಡಲಾಗಿತ್ತು. ಇತರ 40 ಜನರಿಗೆ ಎರಡೂ ಡೋಸ್ ಒಂದೇ ಲಸಿಕೆ ನೀಡಲಾಗಿತ್ತು. ಎರಡು ಡೋಸ್ ಪಡೆದ ನಿರ್ದಿಷ್ಟಸಮಯದ ನಂತರ ಪರೀಕ್ಷೆ ನಡೆಸಿದಾಗ ಬೆರಕೆ ಲಸಿಕೆ ಪಡೆದವರಲ್ಲಿ ಒಂದೇ ಲಸಿಕೆಯ ಎರಡು ಡೋಸ್ ಪಡೆದವರಿಗಿಂತ ಹೆಚ್ಚು ರೋಗನಿರೋಧಕ ಶಕ್ತಿ ಕಂಡುಬಂದಿದೆ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳ ತಂತ್ರಜ್ಞಾನ ಬೇರೆಬೇರೆಯಾಗಿದೆ. ಒಂದು ಅಡೆನೋವೈರಸ್ ಲಸಿಕೆಯಾಗಿದ್ದರೆ, ಇನ್ನೊಂದು ಮೃತ ವೈರಸ್ಗಳನ್ನು ಬಳಸಿ ತಯಾರಿಸಿದ ಲಸಿಕೆಯಾಗಿದೆ. ಆದರೂ ಈ ಎರಡು ಲಸಿಕೆಗಳ ತಲಾ ಒಂದೊಂದು ಡೋಸ್ ಪಡೆಯುವುದರಿಂದ ಯಾವುದೇ ಹೆಚ್ಚಿನ ಅಡ್ಡಪರಿಣಾಮ ಉಂಟಾಗುವುದಿಲ್ಲ. ಈ ಲಸಿಕೆಗಳ ಮಿಶ್ರಣ ಸುರಕ್ಷಿತ. ಒಂದೇ ಲಸಿಕೆಯ ಎರಡು ಡೋಸ್ ಪಡೆದಾಗ ಯಾವ ರೀತಿಯ ಅಡ್ಡಪರಿಣಾಮಗಳು ಕಂಡುಬಂದಿವೆಯೋ ಅಂತಹವೇ ಅಡ್ಡಪರಿಣಾಮಗಳು ಮಿಶ್ರ ಲಸಿಕೆ ಪಡೆದಾಗಲೂ ಕಂಡುಬಂದಿವೆ ಎಂದು ವರದಿ ಹೇಳಿದೆ.
ದೇಶದಲ್ಲಿ ಲಸಿಕಾ ಅಭಿಯಾನ ವೇಗವಾಗಿ ನಡೆಯುತ್ತಿರುವಾಗ ಅಚಾತುರ್ಯದಿಂದ ಎರಡು ಜಾತಿಯ ಲಸಿಕೆಗಳ ಬೆರಕೆಯಾದರೆ ಜನರಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ಈ ಅಧ್ಯಯನ ನಡೆಸಿರುವುದಾಗಿ ಐಸಿಎಂಆರ್ ಹೇಳಿಕೊಂಡಿದೆ.
ಐಸಿಎಂಆರ್ ಹೇಳಿದ್ದೇನು?
-ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ತಂತ್ರಜ್ಞಾನ ಬೇರೆ ಬೇರೆ
-ಆದರೂ ಇವೆರಡರ ಮಿಶ್ರಣ ಸುರಕ್ಷಿತ
-ಹೆಚ್ಚಿನ ಅಡ್ಡಪರಿಣಾಮಗಳು ಬೀರಲ್ಲ
-ಒಂದು ಕಂಪನಿ ಲಸಿಕೆಗಿಂತ ಹೆಚ್ಚು ರೋಗನಿರೋಧಕ ಶಕ್ತಿ ಮಿಶ್ರಣ ಲಸಿಕೆಯಲ್ಲಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments