ಶಾಸಕ ಎ.ಎಸ್.ಪಾಟೀಲ್ ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ದಾಳಿ

Webdunia
ಮಂಗಳವಾರ, 27 ಮಾರ್ಚ್ 2018 (19:15 IST)
ವಿಜಯಪುರ: ರಾಜ್ಯ ವಿಧಾನ ಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ನೀತಿ ಸಂಹಿತೆ ಪಾಲಿಸಲು ಅಧಿಕಾರಿಗಳು ಮುಂದಾಗಿದ್ದು, ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನಿವಾಸಕ್ಕೆ ತಹಸೀಲ್ದಾರ್, ಪಿಎಸೈ, ಮುಖ್ಯಾಧಿಕಾರಿ ಭೇಟಿ ನೀಡಿ ಅಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮ ಸ್ಥಗಿತಗೊಳಿಸಲು ಸೂಚನೆ ನೀಡಿದ ಘಟನೆ ವರದಿಯಾಗಿದೆ. 
ಅಧಿಕಾರಿಗಳ ಕ್ರಮಕ್ಕೆ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ಇದು ರಾಜಕೀಯ ಕಾರ್ಯಕ್ರಮ ಅಲ್ಲ ಎಂದು ನಡಹಳ್ಳಿ ಹೇಳಿದ್ದಾರೆ. ಆದರೆ
 
ಕಾರ್ಯಕ್ರಮಕ್ಕೆ ಆಗಮಿಸಿದ ಮುತೈದೆಯರಿಗೆ ಅರಿಷಿಣ, ಕುಂಕುಮ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಶಾಸಕ ನಡಹಳ್ಳಿ ಮನೆಯನ್ನು ಅಧಿಕಾರಿಗಳು ಶೋಧಿಸಿದರು. ಅಲ್ಲದೇ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಧಾರ್ಮಿಕ ಕಾರ್ಯಕ್ರಮದ ನೆಪದಲ್ಲಿ ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಹೀಗಾಗಿ ಅಧಿಕಾರಿಗಳ ಈ  ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ಮುಂದಿನ ಸುದ್ದಿ
Show comments