Select Your Language

Notifications

webdunia
webdunia
webdunia
webdunia

ಯಾರು ಬೇಕಾದ್ರೂ ಸಚಿವರಾಗಲಿ ನಂಗೇನು? ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಪ್ರಶ್ನೆ

ಯಾರು ಬೇಕಾದ್ರೂ ಸಚಿವರಾಗಲಿ ನಂಗೇನು? ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಪ್ರಶ್ನೆ
ಬೆಂಗಳೂರು , ಮಂಗಳವಾರ, 5 ಜೂನ್ 2018 (12:13 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಜೆಡಿಎಸ್ ನಲ್ಲೂ ಅಸಮಾಧಾನದ ಹೊಗೆ ಜೋರಾಗಿದೆ. ಎಂಎಲ್ ಸಿ ಬಸವರಾಜ ಹೊರಟ್ಟಿ ಪಕ್ಷದ ವರಿಷ್ಠರ ನಡೆಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ನಡೆದ ಜೆಡಿಎಸ್ ಸಭೆಗೆ ವಿಧಾನ ಪರಿಷತ್ ಸದಸ್ಯರನ್ನು ದೂರವಿಡಲಾಗಿತ್ತು. ಅಲ್ಲದೆ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಕೊಟ್ಟು ಸಮಾಧಾನಿಸುವ ಯತ್ನ ನಡೆಸಲಾಗಿತ್ತು.

ಈ ಹಿನ್ನಲೆಯಲ್ಲಿ ಹೊರಟ್ಟಿ ಸಿಟ್ಟಿಗೆದ್ದಿದ್ದು, ಯಾರನ್ನು ಬೇಕಾದರೂ ಸಚಿವರನ್ನಾಗಿ ಮಾಡಲಿ ನಂಗೇನು? ಸಚಿವ ಸ್ಥಾನ ಕೊಡದಿರುವುದಕ್ಕೆ ಸಭಾಪತಿ ಸ್ಥಾನ ಕೊಟ್ಟು ನನ್ನನ್ನು ಸಮಾಧಾನಿಸುವುದು ಬೇಕಾಗಿಲ್ಲ ಎಂದು ಹೊರಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಎಲ್ ಎಗಳಾಯ್ತು, ಇದೀಗ ಸಚಿವ ಸ್ಥಾನಕ್ಕಾಗಿ ಎಂಎಲ್ ಸಿಗಳ ಖ್ಯಾತೆ